ಕಾರ್ಯಕ್ರಮಗಳು

ವಿವೇಕಾನಂದ ಕಾಲೇಜಿನಲ್ಲಿ ಬೆಂಕಿ ಅವಘಡ: ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳ ಪ್ರಾತ್ಯಕ್ಷಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ ಬೆಂಕಿ ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳು ಮತ್ತು ಸುರಕ್ಷತಾ ವಿಧಾನಗಳ ಕುರಿತು ಗುರುವಾರ ಕಾರ್ಯಾಗಾರ ನಡೆಯಿತು.

Advertisement
Advertisement

ಮಂಗಳೂರಿನ ಆಲ್ಫಾ ಟೆಕ್ನಿಕಲ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್ ಸೆಂಟರ್‍ನ ವ್ಯವಸ್ಥಾಪಕ ಪಾಲುದಾರ ರಾಜೇಶ್ ಶೆಟ್ಟಿ ಬೆಂಕಿ ಅವಘಡಗಳು ಸಂಭವಿಸಿದಾಗ ಸ್ವಯಂ ರಕ್ಷಣೆಯ ವಿಧಾನಗಳ ಬಗ್ಗೆ ಮಾತನಾಡಿದರು. ಬೆಂಕಿಯ ಮೂಲವನ್ನು ಹೊಂದಿಕೊಂಡು ವಿವಿಧ ರೀತಿಯ ಬೆಂಕಿ ಆರಿಸುವ ವಿಧಾನಗಳ ಬಗ್ಗೆ ತಿಳಿಸಿದರು. ಬೆಂಕಿ ಅಪಘಾತಗಳನ್ನು ತಡೆಗಟ್ಟುವ ವಿಧಾನಗಳು, ಅಪಘಾತ ನಡೆದ ನಂತರ ಲಭ್ಯವಿರುವ ವ್ಯವಸ್ಥೆಯಲ್ಲಿ ಹೇಗೆ ಬೆಂಕಿಯ ಪರಿಣಾಮಗಳನ್ನು ಕನಿಷ್ಟ ಮಟ್ಟಕ್ಕೆ ತರಬಹುದು ಎಂಬ ಬಗ್ಗೆ ಮಾಹಿತಿ ನೀಡಿದರು. ಬೆಂಕಿ ಆರಿಸುವ ವಿವಿಧ ರೀತಿಯ ಉಪಕರಣಗಳು ಮತ್ತು ಅವುಗಳನ್ನು ಉಪಯೋಗಿಸುವ ಬಗ್ಗೆ ಹಾಗೂ ಬೆಂಕಿ ಆರಿಸುವ ಉಪಕರಣಗಳ ತಯಾರಿ, ರಿಪೇರಿ ಮತ್ತು ಸಂಬಂಧಿಸಿದ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಮಂಗಳೂರಿನ ಆಲ್ಫಾ ಟೆಕ್ನಿಕಲ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್ ಸೆಂಟರ್‍ನ ನಿರ್ದೇಶಕ ಕೃಷ್ಣ ಶ್ರೀನಿವಾಸ ಬಾಬು ಮತ್ತು ಅವರ ತಂಡದವರು ಬೆಂಕಿ ಅವಘಡ ಸಂಭವಿಸಿದಾಗ ಬೆಂಕಿ ಆರಿಸುವ ವಿಧಾನಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅನೇಕ ವಿದ್ಯಾರ್ಥಿಗಳು ಇದರ ಸ್ವಯಂ ಅನುಭವ ಪಡೆದುಕೊಂಡರು.

ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಕಾರಂತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಸಂಘದ ಸಂಯೋಜಕ ಪ್ರೊ. ಶಿವಪ್ರಸಾದ್ ಸ್ವಾಗತಿಸಿ, ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರು ಮತ್ತು ಬಿಎಸ್ಸಿ, ಎಂಎಸ್ಸಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

25 minutes ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

1 day ago