Advertisement
ಕಾರ್ಯಕ್ರಮಗಳು

ವಿವೇಕಾನಂದ ಕಾಲೇಜಿನಲ್ಲಿ ಬೆಂಕಿ ಅವಘಡ: ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳ ಪ್ರಾತ್ಯಕ್ಷಿಕೆ

Share

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ ಬೆಂಕಿ ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳು ಮತ್ತು ಸುರಕ್ಷತಾ ವಿಧಾನಗಳ ಕುರಿತು ಗುರುವಾರ ಕಾರ್ಯಾಗಾರ ನಡೆಯಿತು.

ಮಂಗಳೂರಿನ ಆಲ್ಫಾ ಟೆಕ್ನಿಕಲ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್ ಸೆಂಟರ್‍ನ ವ್ಯವಸ್ಥಾಪಕ ಪಾಲುದಾರ ರಾಜೇಶ್ ಶೆಟ್ಟಿ ಬೆಂಕಿ ಅವಘಡಗಳು ಸಂಭವಿಸಿದಾಗ ಸ್ವಯಂ ರಕ್ಷಣೆಯ ವಿಧಾನಗಳ ಬಗ್ಗೆ ಮಾತನಾಡಿದರು. ಬೆಂಕಿಯ ಮೂಲವನ್ನು ಹೊಂದಿಕೊಂಡು ವಿವಿಧ ರೀತಿಯ ಬೆಂಕಿ ಆರಿಸುವ ವಿಧಾನಗಳ ಬಗ್ಗೆ ತಿಳಿಸಿದರು. ಬೆಂಕಿ ಅಪಘಾತಗಳನ್ನು ತಡೆಗಟ್ಟುವ ವಿಧಾನಗಳು, ಅಪಘಾತ ನಡೆದ ನಂತರ ಲಭ್ಯವಿರುವ ವ್ಯವಸ್ಥೆಯಲ್ಲಿ ಹೇಗೆ ಬೆಂಕಿಯ ಪರಿಣಾಮಗಳನ್ನು ಕನಿಷ್ಟ ಮಟ್ಟಕ್ಕೆ ತರಬಹುದು ಎಂಬ ಬಗ್ಗೆ ಮಾಹಿತಿ ನೀಡಿದರು. ಬೆಂಕಿ ಆರಿಸುವ ವಿವಿಧ ರೀತಿಯ ಉಪಕರಣಗಳು ಮತ್ತು ಅವುಗಳನ್ನು ಉಪಯೋಗಿಸುವ ಬಗ್ಗೆ ಹಾಗೂ ಬೆಂಕಿ ಆರಿಸುವ ಉಪಕರಣಗಳ ತಯಾರಿ, ರಿಪೇರಿ ಮತ್ತು ಸಂಬಂಧಿಸಿದ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಮಂಗಳೂರಿನ ಆಲ್ಫಾ ಟೆಕ್ನಿಕಲ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್ ಸೆಂಟರ್‍ನ ನಿರ್ದೇಶಕ ಕೃಷ್ಣ ಶ್ರೀನಿವಾಸ ಬಾಬು ಮತ್ತು ಅವರ ತಂಡದವರು ಬೆಂಕಿ ಅವಘಡ ಸಂಭವಿಸಿದಾಗ ಬೆಂಕಿ ಆರಿಸುವ ವಿಧಾನಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅನೇಕ ವಿದ್ಯಾರ್ಥಿಗಳು ಇದರ ಸ್ವಯಂ ಅನುಭವ ಪಡೆದುಕೊಂಡರು.

ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಕಾರಂತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಸಂಘದ ಸಂಯೋಜಕ ಪ್ರೊ. ಶಿವಪ್ರಸಾದ್ ಸ್ವಾಗತಿಸಿ, ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರು ಮತ್ತು ಬಿಎಸ್ಸಿ, ಎಂಎಸ್ಸಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

12 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

13 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

13 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

13 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

3 days ago