ಕಾರ್ಯಕ್ರಮಗಳು

ವಿವೇಕಾನಂದ ಕಾಲೇಜಿನಲ್ಲಿ ಮಹಿಳಾ ಸಂಸ್ಕೃತಿ ಉತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಭಾರತ ಆಧ್ಯಾತ್ಮಿಕ ದೇಶವೆಂದು ಗುರುತಿಸಿಕೊಂಡಿದೆ. ಇಲ್ಲಿನ ಸಂಸ್ಕೃತಿ, ಪರಂಪರೆಯು ವೈಶಿಷ್ಟ್ಯ ಪೂರ್ಣವಾಗಿದ್ದು ಇದರಲ್ಲಿ ಮಹಿಳೆಯರ ಕೊಡುಗೆ ವಿಶೇಷವಾದದ್ದು. ನಮ್ಮಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವಂತಹ ಸಾಂಸ್ಕೃತಿಕ ಉತ್ಸವಗಳು ಇಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಪುತ್ತೂರಿನ ಶಾಸಕ ಸಂಜೀವ ಮಠಂದೂರು ಹೇಳಿದರು.

Advertisement
Advertisement

ಅವರು ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ದಕ್ಷಿಣಕನ್ನಡ ಜಿಲ್ಲಾ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಹಾಗೂ ವಿವೇಕಾನಂದ ಮಹಾವಿದ್ಯಾಲಯದ ಸಹಕಾರದೊಂದಿಗೆ ಆಯೋಜಿಸಲಾದ ‘ಮಹಿಳಾ ಸಂಸ್ಕೃತಿ ಉತ್ಸವ’ದಲ್ಲಿ ಮುಖ್ಯ ಅತಿಥಿಗಳಾಗಿ ಶನಿವಾರ ಮಾತನಾಡಿದರು. ಭಾರತ ಮಾತೆಯ ಸುಪುತ್ರಿ ಕರ್ನಾಟಕ ಮಾತೆ ಮಹಿಳೆಯರ ಸಾಧನೆಯನ್ನೇ ಉದ್ದೇಶವನ್ನಾಗಿಸಿಟ್ಟುಕೊಂಡು ಈ ಕಾರ್ಯಕ್ರಮ ಆಯೋಜನೆಗೊಂಡಿದೆ. ಹಾಗಾಗಿ ಪ್ರತಿಯೊಬ್ಬನು ಸಂಸ್ಕೃತಿಯನ್ನು ಅರಿತು ಇನ್ನಷ್ಟು ಇತಿಹಾಸವನ್ನು ನಿರ್ಮಿಸಬೇಕು ಎಂದರು. ಪಾಶ್ಚಾತ್ಯ ಸಂಸ್ಕೃತಿ, ವೇಷ-ಭೂಷಣ, ಆಹಾರ, ಆಚಾರ-ವಿಚಾರ ನಮ್ಮತನವನ್ನು ಕಳೆದುಕೊಳ್ಳುವಂತೆ ಮಾಡುತ್ತಿರುವಾಗಲೇ ಭಾರತದ ಮಹಿಳೆಯರ ವೇಷಭೂಷಣ ಇಂದು ವಿಶ್ವದೆಲ್ಲೆಡೆ ಭಾರತೀಯ ಮಹಿಳೆಯರು ಎಂದು ಗುರುತಿಸುವಷ್ಟರ ಮಟ್ಟಿಗೆ ನಮ್ಮ ಪರಂಪರೆ ಅಥವಾ ಸಂಸ್ಕೃತಿ ಹಬ್ಬಿದೆ ಎಂದು ತಿಳಿಸಿದರು. ಹಂಪಿಯಲ್ಲಿ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಶಿಲ್ಪ ಪ್ರಕಾರಗಳನ್ನು ನೋಡಬಹುದು. ಅಲ್ಲಿ ಮಹಿಳೆಯರ ಪ್ರಾಶಸ್ತ್ಯ ಅಧಿಕವಾಗಿತ್ತು. ಏಕೆಂದರೆ ಪ್ರತಿಯೊಂದು ಸಂಸ್ಕಾರವನ್ನು, ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಬಂದವರು ಮಹಿಳೆಯರು ಹಾಗಾಗಿ ಇಂತಹ ಮಹಿಳಾ ಉತ್ಸವಗಳು ಮುಂದಿನವರಿಗೆ ಜ್ಞಾನವನ್ನು ನೀಡಿ ಭಾರತೀಯ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗುವ ದಾರಿ ದೀಪವಾಗಲಿ ಎಂದು ಹೇಳಿದರು.

ವಿವೇಕಾನಂದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿ.ಜಿ. ಭಟ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ, ಕನಿಷ್ಟ ಒಂದು ಕಲೆಯ ಕುರಿತಾಗಿಯಾದರೂ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಕಲೆ ನಮ್ಮ ಮನಸ್ಸನ್ನು ಒತ್ತಡಗಳಿಂದ ಮುಕ್ತವಾಗಿಸಿ ಪ್ರಫುಲ್ಲವಾಗಿಡುವಲ್ಲಿ ಪರಿಣಾಮಕಾರಿ. ಸಾಂಸ್ಕೃತಿಕ ವಿಚಾರಗಳು ಸಂತಸದ ಮೂಲ ಎಂದು ಹೇಳಿದರು. ವಿದ್ಯಾರ್ಥಿ ದೆಸೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸಾಕಷ್ಟು ಅವಕಾಶಗಳು ಇಂದು ಲಭ್ಯವಿದೆ. ಆದರೆ ಅದನ್ನು ಸದುಪಯೋಗ ಪಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಬೇಕಾಗಿದೆ. ಕಲಿಕೆಯೊಂದಿಗೆ ಕಲಾಭಿರುಚಿಯನ್ನು ರೂಢಿಸಿಕೊಳ್ಳಿ. ಕಲೆಯನ್ನು ಬೆಳೆಸುವಲ್ಲಿ ಕಲಾಭಿಮಾನಿಗಳ ಪಾತ್ರ ಬಹುಮುಖ್ಯ ಎಂದು ನುಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಪ್ರೊ. ಎ.ವಿ. ನಾರಾಯಣ, ಹಿಂದೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಅವಕಾಶ ಹೆಚ್ಚಿನ ಮಂದಿಗೆ ಸಿಗುತ್ತಿರಲಿಲ್ಲ. ಆದರೆ ಈಗ ಕಲಿಕೆಗೂ ಅವಕಾಶವಿದೆ. ಕಲಾವಿದರೂ ಬಹಳಷ್ಟು ಮಂದಿಯಿದ್ದಾರೆ. ಆದರೆ ಕಲಾಭಿಮಾನಿಗಳು, ಪ್ರೇಕ್ಷಕರು ಕಡಿಮೆಯಾಗುತ್ತಿದ್ದಾರೆ. ಮಾನಸಿಕ ಒತ್ತಡಗಳನ್ನು, ವೃತ್ತಿ ಬದುಕಿನ ಜಂಜಾಟಗಳ ನಡುವೆ ನಮ್ಮನ್ನು ಚಟುವಟಿಕೆಯಿಂದ ತುಂಬಿಕೊಳ್ಳುವಂತೆ ಮಾಡುವಲ್ಲಿ ನೃತ್ಯ, ಸಂಗೀತ ಮೊದಲಾದ ಕಲಾಪ್ರಕಾರಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಮಾತನಾಡಿ, ಈ ಕಾರ್ಯಕ್ರಮದ ಆಯೋಜನೆ ಮೂಲಕ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಕಲೆಯನ್ನು ಆಸ್ವಾದಿಸುವ, ಕಲೆಯ ಕುರಿತು ಜ್ಞಾನವನ್ನು ಪಡೆಯು, ಕಲೆಯನ್ನು ಅಭ್ಯಸಿಸುವಂತಾಗಲು ಪ್ರೇರಣೆಯಾಗಿದೆ. ಕೇವಲ ಕಲೆಯನ್ನು ಮನೋರಂಜನೆಗಾಗಿ ನೋಡದೆ, ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಆಯೋಜನೆಯಾಗಬೇಕು ಎಂದರು.
ಈ ಸಂದರ್ಭ ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಹಾಗೂ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು. ಕಾಲೇಜಿನ ಸಂಸ್ಕೃತ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀಶ ಕುಮಾರ ಎಂ. ಸ್ವಾಗತಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಮನಮೋಹನ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Advertisement

ಸಾಂಸ್ಕೃತಿಕ ಕಾರ್ಯಕ್ರಮ: ಈ ಸಾಂಸ್ಕೃತಿಕ ಉತ್ಸವದಲ್ಲಿ ಭಾಮಿನಿ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ, ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಂದ ಭರತನಾಟ್ಯ, ಅಕ್ಷತಾ ದೇವಾಡಿಗ ಅವರಿಂದ ಸ್ಯಾಕ್ಸೊಪೋನ್, ವಿದುಷಿ ವೈ.ಜಿ. ಶ್ರೀಲತ ಮತ್ತು ಬಳಗದಿಂದ ವೀಣಾವಾದನ, ವಿದುಷಿ ಶಾಲಿನಿ ಆತ್ಮಭೂಷಣ ಮತ್ತು ಬಳಗದಿಂದ ನೃತ್ಯರೂಪಕ, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಿಂದ ನೃತ್ಯ ಭಜನೆ, ಅಕ್ಷತಾ ಮತ್ತು ಬಳಗ ಹಾಗೂ ಯಶಸ್ವಿನಿ ಮತ್ತು ಬಳಗದಿಂದ ಜಾನಪದ ನೃತ್ಯ, ಪವಿತ್ರ ವಿ ಮಯ್ಯ ಅವರಿಂದ ಸುಗಮ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

8 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

9 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

9 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

9 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

15 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

22 hours ago