Advertisement
ಕಾರ್ಯಕ್ರಮಗಳು

ವಿವೇಕಾನಂದ ಕಾಲೇಜಿನಲ್ಲಿ ಮಹಿಳಾ ಸಂಸ್ಕೃತಿ ಉತ್ಸವ

Share

ಪುತ್ತೂರು: ಭಾರತ ಆಧ್ಯಾತ್ಮಿಕ ದೇಶವೆಂದು ಗುರುತಿಸಿಕೊಂಡಿದೆ. ಇಲ್ಲಿನ ಸಂಸ್ಕೃತಿ, ಪರಂಪರೆಯು ವೈಶಿಷ್ಟ್ಯ ಪೂರ್ಣವಾಗಿದ್ದು ಇದರಲ್ಲಿ ಮಹಿಳೆಯರ ಕೊಡುಗೆ ವಿಶೇಷವಾದದ್ದು. ನಮ್ಮಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವಂತಹ ಸಾಂಸ್ಕೃತಿಕ ಉತ್ಸವಗಳು ಇಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಪುತ್ತೂರಿನ ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ದಕ್ಷಿಣಕನ್ನಡ ಜಿಲ್ಲಾ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಹಾಗೂ ವಿವೇಕಾನಂದ ಮಹಾವಿದ್ಯಾಲಯದ ಸಹಕಾರದೊಂದಿಗೆ ಆಯೋಜಿಸಲಾದ ‘ಮಹಿಳಾ ಸಂಸ್ಕೃತಿ ಉತ್ಸವ’ದಲ್ಲಿ ಮುಖ್ಯ ಅತಿಥಿಗಳಾಗಿ ಶನಿವಾರ ಮಾತನಾಡಿದರು. ಭಾರತ ಮಾತೆಯ ಸುಪುತ್ರಿ ಕರ್ನಾಟಕ ಮಾತೆ ಮಹಿಳೆಯರ ಸಾಧನೆಯನ್ನೇ ಉದ್ದೇಶವನ್ನಾಗಿಸಿಟ್ಟುಕೊಂಡು ಈ ಕಾರ್ಯಕ್ರಮ ಆಯೋಜನೆಗೊಂಡಿದೆ. ಹಾಗಾಗಿ ಪ್ರತಿಯೊಬ್ಬನು ಸಂಸ್ಕೃತಿಯನ್ನು ಅರಿತು ಇನ್ನಷ್ಟು ಇತಿಹಾಸವನ್ನು ನಿರ್ಮಿಸಬೇಕು ಎಂದರು. ಪಾಶ್ಚಾತ್ಯ ಸಂಸ್ಕೃತಿ, ವೇಷ-ಭೂಷಣ, ಆಹಾರ, ಆಚಾರ-ವಿಚಾರ ನಮ್ಮತನವನ್ನು ಕಳೆದುಕೊಳ್ಳುವಂತೆ ಮಾಡುತ್ತಿರುವಾಗಲೇ ಭಾರತದ ಮಹಿಳೆಯರ ವೇಷಭೂಷಣ ಇಂದು ವಿಶ್ವದೆಲ್ಲೆಡೆ ಭಾರತೀಯ ಮಹಿಳೆಯರು ಎಂದು ಗುರುತಿಸುವಷ್ಟರ ಮಟ್ಟಿಗೆ ನಮ್ಮ ಪರಂಪರೆ ಅಥವಾ ಸಂಸ್ಕೃತಿ ಹಬ್ಬಿದೆ ಎಂದು ತಿಳಿಸಿದರು. ಹಂಪಿಯಲ್ಲಿ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಶಿಲ್ಪ ಪ್ರಕಾರಗಳನ್ನು ನೋಡಬಹುದು. ಅಲ್ಲಿ ಮಹಿಳೆಯರ ಪ್ರಾಶಸ್ತ್ಯ ಅಧಿಕವಾಗಿತ್ತು. ಏಕೆಂದರೆ ಪ್ರತಿಯೊಂದು ಸಂಸ್ಕಾರವನ್ನು, ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಬಂದವರು ಮಹಿಳೆಯರು ಹಾಗಾಗಿ ಇಂತಹ ಮಹಿಳಾ ಉತ್ಸವಗಳು ಮುಂದಿನವರಿಗೆ ಜ್ಞಾನವನ್ನು ನೀಡಿ ಭಾರತೀಯ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗುವ ದಾರಿ ದೀಪವಾಗಲಿ ಎಂದು ಹೇಳಿದರು.

ವಿವೇಕಾನಂದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿ.ಜಿ. ಭಟ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ, ಕನಿಷ್ಟ ಒಂದು ಕಲೆಯ ಕುರಿತಾಗಿಯಾದರೂ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಕಲೆ ನಮ್ಮ ಮನಸ್ಸನ್ನು ಒತ್ತಡಗಳಿಂದ ಮುಕ್ತವಾಗಿಸಿ ಪ್ರಫುಲ್ಲವಾಗಿಡುವಲ್ಲಿ ಪರಿಣಾಮಕಾರಿ. ಸಾಂಸ್ಕೃತಿಕ ವಿಚಾರಗಳು ಸಂತಸದ ಮೂಲ ಎಂದು ಹೇಳಿದರು. ವಿದ್ಯಾರ್ಥಿ ದೆಸೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸಾಕಷ್ಟು ಅವಕಾಶಗಳು ಇಂದು ಲಭ್ಯವಿದೆ. ಆದರೆ ಅದನ್ನು ಸದುಪಯೋಗ ಪಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಬೇಕಾಗಿದೆ. ಕಲಿಕೆಯೊಂದಿಗೆ ಕಲಾಭಿರುಚಿಯನ್ನು ರೂಢಿಸಿಕೊಳ್ಳಿ. ಕಲೆಯನ್ನು ಬೆಳೆಸುವಲ್ಲಿ ಕಲಾಭಿಮಾನಿಗಳ ಪಾತ್ರ ಬಹುಮುಖ್ಯ ಎಂದು ನುಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಪ್ರೊ. ಎ.ವಿ. ನಾರಾಯಣ, ಹಿಂದೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಅವಕಾಶ ಹೆಚ್ಚಿನ ಮಂದಿಗೆ ಸಿಗುತ್ತಿರಲಿಲ್ಲ. ಆದರೆ ಈಗ ಕಲಿಕೆಗೂ ಅವಕಾಶವಿದೆ. ಕಲಾವಿದರೂ ಬಹಳಷ್ಟು ಮಂದಿಯಿದ್ದಾರೆ. ಆದರೆ ಕಲಾಭಿಮಾನಿಗಳು, ಪ್ರೇಕ್ಷಕರು ಕಡಿಮೆಯಾಗುತ್ತಿದ್ದಾರೆ. ಮಾನಸಿಕ ಒತ್ತಡಗಳನ್ನು, ವೃತ್ತಿ ಬದುಕಿನ ಜಂಜಾಟಗಳ ನಡುವೆ ನಮ್ಮನ್ನು ಚಟುವಟಿಕೆಯಿಂದ ತುಂಬಿಕೊಳ್ಳುವಂತೆ ಮಾಡುವಲ್ಲಿ ನೃತ್ಯ, ಸಂಗೀತ ಮೊದಲಾದ ಕಲಾಪ್ರಕಾರಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಮಾತನಾಡಿ, ಈ ಕಾರ್ಯಕ್ರಮದ ಆಯೋಜನೆ ಮೂಲಕ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಕಲೆಯನ್ನು ಆಸ್ವಾದಿಸುವ, ಕಲೆಯ ಕುರಿತು ಜ್ಞಾನವನ್ನು ಪಡೆಯು, ಕಲೆಯನ್ನು ಅಭ್ಯಸಿಸುವಂತಾಗಲು ಪ್ರೇರಣೆಯಾಗಿದೆ. ಕೇವಲ ಕಲೆಯನ್ನು ಮನೋರಂಜನೆಗಾಗಿ ನೋಡದೆ, ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಆಯೋಜನೆಯಾಗಬೇಕು ಎಂದರು.
ಈ ಸಂದರ್ಭ ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಹಾಗೂ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು. ಕಾಲೇಜಿನ ಸಂಸ್ಕೃತ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀಶ ಕುಮಾರ ಎಂ. ಸ್ವಾಗತಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಮನಮೋಹನ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ: ಈ ಸಾಂಸ್ಕೃತಿಕ ಉತ್ಸವದಲ್ಲಿ ಭಾಮಿನಿ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ, ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಂದ ಭರತನಾಟ್ಯ, ಅಕ್ಷತಾ ದೇವಾಡಿಗ ಅವರಿಂದ ಸ್ಯಾಕ್ಸೊಪೋನ್, ವಿದುಷಿ ವೈ.ಜಿ. ಶ್ರೀಲತ ಮತ್ತು ಬಳಗದಿಂದ ವೀಣಾವಾದನ, ವಿದುಷಿ ಶಾಲಿನಿ ಆತ್ಮಭೂಷಣ ಮತ್ತು ಬಳಗದಿಂದ ನೃತ್ಯರೂಪಕ, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಿಂದ ನೃತ್ಯ ಭಜನೆ, ಅಕ್ಷತಾ ಮತ್ತು ಬಳಗ ಹಾಗೂ ಯಶಸ್ವಿನಿ ಮತ್ತು ಬಳಗದಿಂದ ಜಾನಪದ ನೃತ್ಯ, ಪವಿತ್ರ ವಿ ಮಯ್ಯ ಅವರಿಂದ ಸುಗಮ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

21 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

21 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago