Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸ್ಪರ್ಧೆ- ಸೋಲಿನ ಪಾಠವೇ ಯಶಸ್ಸಿಗೆ ಮೆಟ್ಟಿಲು: ಶ್ರೀನಿವಾಸ ಪೈ

Share

ಪುತ್ತೂರು: ಕಾಲೇಜಿನಲ್ಲಿ ಏರ್ಪಡಿಸುವ ಸ್ಪರ್ಧೆಗಳು ವ್ಯಕ್ತಿತ್ವ ವಿಕಸನಕ್ಕೆ ಒಂದು ಅವಕಾಶ. ಬಹುಮಾನ ಸಿಗದೇ ಇರುವವರು ಬೇಸರ ಮಾಡಿಕೊಳ್ಳದೆ, ಇನ್ನಷ್ಟು ಪ್ರಯ್ನಗಳನ್ನು ನಡೆಸಿ ಮುಂದೆ ಬಹುಮಾನಗಳಿಸಿಕೊಳ್ಳುವ ಹಂತಕ್ಕೇರಬೇಕು. ಸೋಲುಗಳಿಂದ ಪಾಠ ಕಲಿತು, ತಪ್ಪುಗಳನ್ನು ಅರಿತು ಸರಿಪಡಿಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕಾಲೇಜಿನ ವಿಜ್ಞಾನ ಸಂಘ ಹಾಗೂ ಐಕ್ಯುಎಸಿ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ವಿಜ್ಞಾನ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಸೋಮವಾರ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿ.ಜಿ.ಭಟ್ ಮಾತನಾಡಿ, ವಿಜ್ಞಾನದ ವಿದ್ಯಾರ್ಥಿಗಳು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ವಿಶ್ಲೇಷಿಸುವ ಸಾಮರ್ಥ್ಯ ಹೊಂದಿದ್ದು ಅದರ ಸದುಪಯೋಗ ಆಗಿರುವುದು ಕಾರ್ಯಕ್ರಮ ಆಯೋಜನೆಯಲ್ಲಿ ಕಂಡುಬರುತ್ತದೆ. ಇದು ಎಲ್ಲರಿಗೂ ಮಾದರಿಯಾಗಲಿ. ವಿದ್ಯಾರ್ಥಿಗಳು ತಮ್ಮ ಹಿರಿಯರ ಸಾಧನೆಗಳನ್ನು ನೋಡಿ ಪ್ರೇರಿತರಾಗಿ ತಮ್ಮ ಜೀವನದಲ್ಲಿಯೂ ಏನಾದರೂ ಉನ್ನತ ಗುರಿ ಇಟ್ಟುಕೊಂಡು ಅದನ್ನು ಪಡೆಯುವಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು.

ಬಹುಮಾನ:ತೃತೀಯ ಬಿಎಸ್ಸಿ ವಿದ್ಯಾರ್ಥಿಗಳು ದ್ವಿತೀಯ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿಗಳಿಗೆ ಒಟ್ಟು 20 ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ದ್ವಿತೀಯ ಬಿಎಸ್ಸಿ ‘ಡಿ’ವಿಭಾಗ ಬಹುಮಾನವನ್ನು ಪಡೆದುಕೊಂಡರು.

ಗೌರವಾರ್ಪಣೆ: ಕಾರ್ಯಕ್ರಮದಲ್ಲಿ ರಾಂಕ್ ವಿಜೇತ ಬಿಎಸ್ಸಿ ವಿದ್ಯಾರ್ಥಿಗಳಾದ ರೂಪಶ್ರೀ ಮತ್ತು ಮನ್ವಿತಾ ಅವರನ್ನು ಗೌರವಿಸಲಾಯಿತು. ಈ ವರ್ಷ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಭಾಗವಹಿಸಿದ ಕಾಲೇಜಿನ ಎನ್‍ಸಿಸಿ ವಿದ್ಯಾರ್ಥಿನಿಯರಾದ ಪ್ರಿಯಾ ಡಿ. ಮತ್ತು ಅಂಕಿತಾ ವಿ.ಕೆ. ಅವರನ್ನು ಗೌರವಿಸಲಾಯಿತು.

ಅನಘಾ ಎಂ. ಪ್ರಾರ್ಥಿಸಿದರು. ಸಹನಾ ರೈ ಸ್ವಾಗತಿಸಿದರು. ವಿಜ್ಞಾನ ಸಂಘದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ. ಎನ್. ಪ್ರಸ್ತಾವನೆಗೈದರು. ಗೌರವಾರ್ಪಣೆ ಕಾರ್ಯಕ್ರಮವನ್ನು ಈಶ್ವರ ಪ್ರಸಾದ್ ನಿರ್ವಹಿಸಿದರು. ವಿಜ್ಞಾನ ಸಂಘದ ಅಧ್ಯಕ್ಷೆ ಆಶಾದೇವಿ ಕೆ.ಎಸ್. ವಂದಿಸಿದರು. ಸುನಯನ ಎ.ಜಿ. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

3 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

3 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

3 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

3 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago