Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸ್ಪರ್ಧೆ- ಸೋಲಿನ ಪಾಠವೇ ಯಶಸ್ಸಿಗೆ ಮೆಟ್ಟಿಲು: ಶ್ರೀನಿವಾಸ ಪೈ

Share

ಪುತ್ತೂರು: ಕಾಲೇಜಿನಲ್ಲಿ ಏರ್ಪಡಿಸುವ ಸ್ಪರ್ಧೆಗಳು ವ್ಯಕ್ತಿತ್ವ ವಿಕಸನಕ್ಕೆ ಒಂದು ಅವಕಾಶ. ಬಹುಮಾನ ಸಿಗದೇ ಇರುವವರು ಬೇಸರ ಮಾಡಿಕೊಳ್ಳದೆ, ಇನ್ನಷ್ಟು ಪ್ರಯ್ನಗಳನ್ನು ನಡೆಸಿ ಮುಂದೆ ಬಹುಮಾನಗಳಿಸಿಕೊಳ್ಳುವ ಹಂತಕ್ಕೇರಬೇಕು. ಸೋಲುಗಳಿಂದ ಪಾಠ ಕಲಿತು, ತಪ್ಪುಗಳನ್ನು ಅರಿತು ಸರಿಪಡಿಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕಾಲೇಜಿನ ವಿಜ್ಞಾನ ಸಂಘ ಹಾಗೂ ಐಕ್ಯುಎಸಿ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ವಿಜ್ಞಾನ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಸೋಮವಾರ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿ.ಜಿ.ಭಟ್ ಮಾತನಾಡಿ, ವಿಜ್ಞಾನದ ವಿದ್ಯಾರ್ಥಿಗಳು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ವಿಶ್ಲೇಷಿಸುವ ಸಾಮರ್ಥ್ಯ ಹೊಂದಿದ್ದು ಅದರ ಸದುಪಯೋಗ ಆಗಿರುವುದು ಕಾರ್ಯಕ್ರಮ ಆಯೋಜನೆಯಲ್ಲಿ ಕಂಡುಬರುತ್ತದೆ. ಇದು ಎಲ್ಲರಿಗೂ ಮಾದರಿಯಾಗಲಿ. ವಿದ್ಯಾರ್ಥಿಗಳು ತಮ್ಮ ಹಿರಿಯರ ಸಾಧನೆಗಳನ್ನು ನೋಡಿ ಪ್ರೇರಿತರಾಗಿ ತಮ್ಮ ಜೀವನದಲ್ಲಿಯೂ ಏನಾದರೂ ಉನ್ನತ ಗುರಿ ಇಟ್ಟುಕೊಂಡು ಅದನ್ನು ಪಡೆಯುವಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು.

ಬಹುಮಾನ:ತೃತೀಯ ಬಿಎಸ್ಸಿ ವಿದ್ಯಾರ್ಥಿಗಳು ದ್ವಿತೀಯ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿಗಳಿಗೆ ಒಟ್ಟು 20 ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ದ್ವಿತೀಯ ಬಿಎಸ್ಸಿ ‘ಡಿ’ವಿಭಾಗ ಬಹುಮಾನವನ್ನು ಪಡೆದುಕೊಂಡರು.

ಗೌರವಾರ್ಪಣೆ: ಕಾರ್ಯಕ್ರಮದಲ್ಲಿ ರಾಂಕ್ ವಿಜೇತ ಬಿಎಸ್ಸಿ ವಿದ್ಯಾರ್ಥಿಗಳಾದ ರೂಪಶ್ರೀ ಮತ್ತು ಮನ್ವಿತಾ ಅವರನ್ನು ಗೌರವಿಸಲಾಯಿತು. ಈ ವರ್ಷ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಭಾಗವಹಿಸಿದ ಕಾಲೇಜಿನ ಎನ್‍ಸಿಸಿ ವಿದ್ಯಾರ್ಥಿನಿಯರಾದ ಪ್ರಿಯಾ ಡಿ. ಮತ್ತು ಅಂಕಿತಾ ವಿ.ಕೆ. ಅವರನ್ನು ಗೌರವಿಸಲಾಯಿತು.

ಅನಘಾ ಎಂ. ಪ್ರಾರ್ಥಿಸಿದರು. ಸಹನಾ ರೈ ಸ್ವಾಗತಿಸಿದರು. ವಿಜ್ಞಾನ ಸಂಘದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ. ಎನ್. ಪ್ರಸ್ತಾವನೆಗೈದರು. ಗೌರವಾರ್ಪಣೆ ಕಾರ್ಯಕ್ರಮವನ್ನು ಈಶ್ವರ ಪ್ರಸಾದ್ ನಿರ್ವಹಿಸಿದರು. ವಿಜ್ಞಾನ ಸಂಘದ ಅಧ್ಯಕ್ಷೆ ಆಶಾದೇವಿ ಕೆ.ಎಸ್. ವಂದಿಸಿದರು. ಸುನಯನ ಎ.ಜಿ. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

11 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

14 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

15 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

15 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

15 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

23 hours ago