Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸ್ಪರ್ಧೆ- ಸೋಲಿನ ಪಾಠವೇ ಯಶಸ್ಸಿಗೆ ಮೆಟ್ಟಿಲು: ಶ್ರೀನಿವಾಸ ಪೈ

Share

ಪುತ್ತೂರು: ಕಾಲೇಜಿನಲ್ಲಿ ಏರ್ಪಡಿಸುವ ಸ್ಪರ್ಧೆಗಳು ವ್ಯಕ್ತಿತ್ವ ವಿಕಸನಕ್ಕೆ ಒಂದು ಅವಕಾಶ. ಬಹುಮಾನ ಸಿಗದೇ ಇರುವವರು ಬೇಸರ ಮಾಡಿಕೊಳ್ಳದೆ, ಇನ್ನಷ್ಟು ಪ್ರಯ್ನಗಳನ್ನು ನಡೆಸಿ ಮುಂದೆ ಬಹುಮಾನಗಳಿಸಿಕೊಳ್ಳುವ ಹಂತಕ್ಕೇರಬೇಕು. ಸೋಲುಗಳಿಂದ ಪಾಠ ಕಲಿತು, ತಪ್ಪುಗಳನ್ನು ಅರಿತು ಸರಿಪಡಿಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕಾಲೇಜಿನ ವಿಜ್ಞಾನ ಸಂಘ ಹಾಗೂ ಐಕ್ಯುಎಸಿ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ವಿಜ್ಞಾನ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಸೋಮವಾರ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿ.ಜಿ.ಭಟ್ ಮಾತನಾಡಿ, ವಿಜ್ಞಾನದ ವಿದ್ಯಾರ್ಥಿಗಳು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ವಿಶ್ಲೇಷಿಸುವ ಸಾಮರ್ಥ್ಯ ಹೊಂದಿದ್ದು ಅದರ ಸದುಪಯೋಗ ಆಗಿರುವುದು ಕಾರ್ಯಕ್ರಮ ಆಯೋಜನೆಯಲ್ಲಿ ಕಂಡುಬರುತ್ತದೆ. ಇದು ಎಲ್ಲರಿಗೂ ಮಾದರಿಯಾಗಲಿ. ವಿದ್ಯಾರ್ಥಿಗಳು ತಮ್ಮ ಹಿರಿಯರ ಸಾಧನೆಗಳನ್ನು ನೋಡಿ ಪ್ರೇರಿತರಾಗಿ ತಮ್ಮ ಜೀವನದಲ್ಲಿಯೂ ಏನಾದರೂ ಉನ್ನತ ಗುರಿ ಇಟ್ಟುಕೊಂಡು ಅದನ್ನು ಪಡೆಯುವಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು.

ಬಹುಮಾನ:ತೃತೀಯ ಬಿಎಸ್ಸಿ ವಿದ್ಯಾರ್ಥಿಗಳು ದ್ವಿತೀಯ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿಗಳಿಗೆ ಒಟ್ಟು 20 ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ದ್ವಿತೀಯ ಬಿಎಸ್ಸಿ ‘ಡಿ’ವಿಭಾಗ ಬಹುಮಾನವನ್ನು ಪಡೆದುಕೊಂಡರು.

ಗೌರವಾರ್ಪಣೆ: ಕಾರ್ಯಕ್ರಮದಲ್ಲಿ ರಾಂಕ್ ವಿಜೇತ ಬಿಎಸ್ಸಿ ವಿದ್ಯಾರ್ಥಿಗಳಾದ ರೂಪಶ್ರೀ ಮತ್ತು ಮನ್ವಿತಾ ಅವರನ್ನು ಗೌರವಿಸಲಾಯಿತು. ಈ ವರ್ಷ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಭಾಗವಹಿಸಿದ ಕಾಲೇಜಿನ ಎನ್‍ಸಿಸಿ ವಿದ್ಯಾರ್ಥಿನಿಯರಾದ ಪ್ರಿಯಾ ಡಿ. ಮತ್ತು ಅಂಕಿತಾ ವಿ.ಕೆ. ಅವರನ್ನು ಗೌರವಿಸಲಾಯಿತು.

ಅನಘಾ ಎಂ. ಪ್ರಾರ್ಥಿಸಿದರು. ಸಹನಾ ರೈ ಸ್ವಾಗತಿಸಿದರು. ವಿಜ್ಞಾನ ಸಂಘದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ. ಎನ್. ಪ್ರಸ್ತಾವನೆಗೈದರು. ಗೌರವಾರ್ಪಣೆ ಕಾರ್ಯಕ್ರಮವನ್ನು ಈಶ್ವರ ಪ್ರಸಾದ್ ನಿರ್ವಹಿಸಿದರು. ವಿಜ್ಞಾನ ಸಂಘದ ಅಧ್ಯಕ್ಷೆ ಆಶಾದೇವಿ ಕೆ.ಎಸ್. ವಂದಿಸಿದರು. ಸುನಯನ ಎ.ಜಿ. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago