Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ ದಿನ : ಸಾಧನೆಯನ್ನು ಸೇವೆಗೋಸ್ಕರ ಬಳಸಿ: ಡಾ. ಕೃಷ್ಣ ಭಟ್

Share

ಪುತ್ತೂರು: ಪ್ರತಿಭೆ ಪ್ರತಿಯೊಬ್ಬರಲ್ಲೂ ಇದೆ. ಹೆಚ್ಚಿನವರು ಅವರವರ ಆಸಕ್ತ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಾರೆ. ಇಂದು ಪ್ರತಿಭಾವಂತರು ಮಾಡಿದ ಸಾಧನೆಯಿಂದ ಸಮಾಜಕ್ಕೆ ಪ್ರಯೋಜನವೇನು ಎಂಬುದನ್ನು ವಿಮರ್ಶಿಸಬೇಕಿದೆ. ಸಾಧಕ ತನ್ನ ಸಾಧನೆಯನ್ನು ಸೇವೆಗೋಸ್ಕರ, ಸಮಾಜದ ಏಳಿಗೆಗಾಗಿ ಉಪಯೋಗಿಸಿದರೆ ಜೀವನದಲ್ಲಿ ಸಾರ್ಥಖ್ಯವನ್ನು ಪಡೆಯಬಹುದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರ ನಡೆದ ಸಪ್ತಪರ್ಣೋತ್ಸವ ದಿನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಂಗಳೂರಿನ ಹರೇಕಳ ಹಾಜಬ್ಬರ ಸಾಧನೆಗೆ ದಕ್ಕಿದ ಸಮ್ಮಾನ, ಪ್ರಶಸ್ತಿ ಕೇವಲ ಅವರ ಪ್ರತಿಭೆಗೆ ದಕ್ಕಿದ್ದಲ್ಲ. ಸಮಾಜದ ಅಭಿವೃದ್ಧಿಗಾಗಿ ಅವರು ನೀಡಿದ ನಿಶ್ಕಲ್ಮಶ ಸೇವೆಗೆ ದೊರೆತ ಪುರಸ್ಕಾರ. ಪ್ರತಿಯೊಬ್ಬ ಸಾಧಕನು ಸಮಾಜಕ್ಕೆ ಸೇವೆಯನ್ನು ನೀಡಬೇಕು ಎಂದರು ಅಲ್ಲದೆ, ಕೇವಲ ಆರ್ಥಿಕವಾಗಿ ಬಲಿಷ್ಟವಾಗಿದ್ದರೆ ಸಮಾಜ ಸೇವೆಯನ್ನು ಮಾಡಬಹುದು ಎಂದು ಹಲವರು ಹೇಳುತ್ತಾರೆ. ಆದರೆ ಇದೆಲ್ಲಕ್ಕಿಂತ ಮಿಗಿಲಾದದ್ದು ಸೇವಾ ಮನೋಭಾವ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳೀಕೃಷ್ಣ ಕೆ.ಎನ್. ಚಳ್ಳಂಗಾರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸೃಜಶೀಲತೆಯನ್ನು ತರುವ ನಿಟ್ಟಿನಲ್ಲಿ ಇಂದು ಸಪ್ತಪರ್ಣೋತ್ಸವ ಕಾರ್ಯಕ್ರಮ ಮುನ್ನುಡಿ ಬರೆದಿದೆ. ವಿದ್ಯಾರ್ಥಿಗಳು ತಮ್ಮಲ್ಲಿ ಸೃಜನಶೀಲತೆಯ ಜೊತೆಗೆ ವಿಶೇಷತೆಯನ್ನು ರೂಢಿಸಿಕೊಳ್ಳಬೇಕು. ಮುಂದೆ ತರಗತಿಯ ಒಳಗೂ ಸೃಜನಶೀಲತೆ, ವಿಶೇಷತೆಯನ್ನು ತರುವ ಮೂಲಕ ಗುರುತಿಸಿಕೊಳ್ಳಬೇಕು ಎಂದರು.

ಬಹುಮಾನ ವಿತರಣೆ : ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳ ಶೈಕ್ಷಣಿಕ, ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕಿ ಸುಪ್ರಭಾ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ರಮೇಶ್, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮೀ ವಿ. ಭಟ್, ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಪ್ರೊ. ಕೃಷ್ಣ ಕಾರಂತ ಕೆ., ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಲಿಖಿತಾ ವಿ.ಕೆ. ಉಪಸ್ಥಿತರಿದ್ದರು. ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ರಶ್ಮಿ, ಅನುಷಾ ಸಿ.ಎಚ್. ಪ್ರಾರ್ಥಿಸಿದರು. ಪ್ರಾಚಾರ್ಯ ಪ್ರೊ. ವಿ.ಜಿ. ಭಟ್ ಸ್ವಾಗತಿಸಿದರು, ಸಂಸ್ಕೃತ ಉಪನ್ಯಾಸಕ ಡಾ. ಶ್ರೀಶ ಕುಮಾರ್ ಪ್ರಸ್ತಾವನೆಗೈದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಶಾಂತ್ ವಿದ್ಯಾರ್ಥಿ ಸಂಘದ ವರದಿ ವಾಚಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ವಸ್ತಿಕ್ ಕೆ.ಆರ್. ವಂದಿಸಿದರು. ಸ್ನಾತಕೋತ್ತರ ವಿಭಾಗಗಳ ಸಂಯೋಜಕಿ ಡಾ. ವಿಜಯಸರಸ್ವತಿ ಬಿ. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

11 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago