ವಿವೇಕಾನಂದ ಕಾಲೇಜಿನಲ್ಲಿ ಸಾಹಿತ್ಯ ಮಂಟಪ ಕಾರ್ಯಕ್ರಮ- ಸಾಹಿತ್ಯದ ವ್ಯಾಪ್ತಿ ಬಹಳ ಅಗಾಧವಾದುದು: ರವಿಶಂಕರ್

February 12, 2020
2:41 PM

ಪುತ್ತೂರು: ವಿದ್ಯಾರ್ಥಿಗಳು ಸಾಹಿತ್ಯದಲ್ಲಿ ಭಾವನಾತ್ಮಕ ವಿಚಾರಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಔಪಚಾರಿಕ ನೆಲೆಯಿಂದ ವಿಚಾರಗಳು ಹೊರಬಂದರೆ ಸಾಹಿತ್ಯದಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಬಹುದು. ಸಾಹಿತ್ಯದ ವ್ಯಾಪ್ತಿ ಬಹಳ ಅಗಾಧವಾದುದು ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಸಾಹಿತ್ಯದ ವಿದ್ಯಾರ್ಥಿಗಳು ಎಂಬ ಪ್ರಜ್ಞೆಯನ್ನಿಟ್ಟು ವ್ಯವಹರಿಸುವುದು ಉತ್ತಮ ಎಂದು ವಿವೇಕಾನಂದ ಕಾಲೇಜಿನ ಕನ್ನಡ ಉಪನ್ಯಾಸಕ ರವಿಶಂಕರ್ ಅಭಿಪ್ರಾಯಪಟ್ಟರು.

Advertisement

ಅವರು ಇಲ್ಲಿನ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ತೃತೀಯ ಕನ್ನಡ ಐಚ್ಛಿಕ ವಿದ್ಯಾರ್ಥಿಗಳು ಆಯೋಜಿಸುವ ಸಾಹಿತ್ಯ ಮಂಟಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಸಿಕ್ಕಿರುವ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಇದರಿಂದ ಮುಂದೆ ಉತ್ತಮ ರೀತಿಯ ಪ್ರತಿಫಲ ದೊರೆಯುತ್ತದೆ. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಹಾಗೂ ವಿಭಾಗದಿಂದ ಪ್ರೋತ್ಸಾಹ ಸಿಗುತ್ತಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಎಚ್.ಜಿ. ಮಾತನಾಡಿ, ಜಗತ್ತು ವೇಗವಾಗಿ ಚಲಿಸುತ್ತಿದೆ. ವಿದ್ಯಾರ್ಥಿಗಳು ಆಲಿಸುವ ಹಾಗೂ ಇತರರೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ತಾಳ್ಮೆ ಹೊಂದಿರಬೇಕು. ಹೆಚ್ಚಿನ ಕ್ರಿಯಾಶೀಲ ಅಧ್ಯಯನ, ಉತ್ತಮವಾಗಿ ಬರೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಈ ಸಂದರ್ಭ ಯುವ ಸಾಹಿತಗಳಾದ ಸೌಜನ್ಯ, ಬೃಂದಾ, ಪ್ರತಿಮಾ ಭಟ್, ನಮಿತ, ಶಿಲ್ಪಾ ತಮ್ಮ ಸ್ವರಚಿತ ಲೇಖನ ಹಾಗೂ ಕವನಗಳನ್ನು ಮಂಡಿಸಿದರು. ವೇದಿಕೆಯಲ್ಲಿ ಕನ್ನಡ ಸಂಘದ ಸಂಯೋಜಕಿ ಡಾ. ಗೀತಾಕುಮಾರಿ ಟಿ. ಉಪಸ್ಥಿತರಿದ್ದರು. ಕನ್ನಡ ಐಚ್ಛಿಕ ವಿದ್ಯಾರ್ಥಿಗಳಾದ ಸ್ವಾತಿ ಪ್ರಾರ್ಥಿಸಿದರು. ಕಾರ್ತಿಕ್ ಸ್ವಾಗತಿಸಿದರು. ಮೇಘನಾ ವಂದಿಸಿದರು. ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ
August 16, 2025
11:33 AM
by: ದಿವ್ಯ ಮಹೇಶ್
ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ
August 16, 2025
11:25 AM
by: The Rural Mirror ಸುದ್ದಿಜಾಲ
ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ
August 16, 2025
11:17 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ
August 15, 2025
2:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group