ಪುತ್ತೂರು: ವಿದ್ಯಾರ್ಥಿಗಳು ಸಾಹಿತ್ಯದಲ್ಲಿ ಭಾವನಾತ್ಮಕ ವಿಚಾರಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಔಪಚಾರಿಕ ನೆಲೆಯಿಂದ ವಿಚಾರಗಳು ಹೊರಬಂದರೆ ಸಾಹಿತ್ಯದಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಬಹುದು. ಸಾಹಿತ್ಯದ ವ್ಯಾಪ್ತಿ ಬಹಳ ಅಗಾಧವಾದುದು ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಸಾಹಿತ್ಯದ ವಿದ್ಯಾರ್ಥಿಗಳು ಎಂಬ ಪ್ರಜ್ಞೆಯನ್ನಿಟ್ಟು ವ್ಯವಹರಿಸುವುದು ಉತ್ತಮ ಎಂದು ವಿವೇಕಾನಂದ ಕಾಲೇಜಿನ ಕನ್ನಡ ಉಪನ್ಯಾಸಕ ರವಿಶಂಕರ್ ಅಭಿಪ್ರಾಯಪಟ್ಟರು.
ಅವರು ಇಲ್ಲಿನ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ತೃತೀಯ ಕನ್ನಡ ಐಚ್ಛಿಕ ವಿದ್ಯಾರ್ಥಿಗಳು ಆಯೋಜಿಸುವ ಸಾಹಿತ್ಯ ಮಂಟಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಸಿಕ್ಕಿರುವ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಇದರಿಂದ ಮುಂದೆ ಉತ್ತಮ ರೀತಿಯ ಪ್ರತಿಫಲ ದೊರೆಯುತ್ತದೆ. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಹಾಗೂ ವಿಭಾಗದಿಂದ ಪ್ರೋತ್ಸಾಹ ಸಿಗುತ್ತಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಎಚ್.ಜಿ. ಮಾತನಾಡಿ, ಜಗತ್ತು ವೇಗವಾಗಿ ಚಲಿಸುತ್ತಿದೆ. ವಿದ್ಯಾರ್ಥಿಗಳು ಆಲಿಸುವ ಹಾಗೂ ಇತರರೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ತಾಳ್ಮೆ ಹೊಂದಿರಬೇಕು. ಹೆಚ್ಚಿನ ಕ್ರಿಯಾಶೀಲ ಅಧ್ಯಯನ, ಉತ್ತಮವಾಗಿ ಬರೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಈ ಸಂದರ್ಭ ಯುವ ಸಾಹಿತಗಳಾದ ಸೌಜನ್ಯ, ಬೃಂದಾ, ಪ್ರತಿಮಾ ಭಟ್, ನಮಿತ, ಶಿಲ್ಪಾ ತಮ್ಮ ಸ್ವರಚಿತ ಲೇಖನ ಹಾಗೂ ಕವನಗಳನ್ನು ಮಂಡಿಸಿದರು. ವೇದಿಕೆಯಲ್ಲಿ ಕನ್ನಡ ಸಂಘದ ಸಂಯೋಜಕಿ ಡಾ. ಗೀತಾಕುಮಾರಿ ಟಿ. ಉಪಸ್ಥಿತರಿದ್ದರು. ಕನ್ನಡ ಐಚ್ಛಿಕ ವಿದ್ಯಾರ್ಥಿಗಳಾದ ಸ್ವಾತಿ ಪ್ರಾರ್ಥಿಸಿದರು. ಕಾರ್ತಿಕ್ ಸ್ವಾಗತಿಸಿದರು. ಮೇಘನಾ ವಂದಿಸಿದರು. ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…