ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ 2 ದಿನದ ರಾಜ್ಯಮಟ್ಟದ ಕಾರ್ಯಾಗಾರಕ್ಕೆ ಚಾಲನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಪ್ರಪಂಚದಾದ್ಯಂತ ತಂತ್ರಜ್ಞಾನದ ಬೆಳವಣಿಗೆ ತ್ವರಿತಗತಿಯಲ್ಲಾಗುತ್ತಿದೆ, ಇದರಿಂದ ತಾಂತ್ರಿಕ ಕ್ಷೇತ್ರದಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡಲ್ಲಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಬಹುದು. ಜೊತೆಗೆಕೌಶಲ್ಯವನ್ನು ವೃದ್ಧಿಸುವ ಮುಖೇನ ಯಾವುದೇ ಕ್ಷೇತ್ರದಲ್ಲಾದರೂ ನುರಿತರಾಗಲು ಸಾಧ್ಯ ಎಂದು ವಿವೇಕಾನಂದ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಡಾ. ಎಂ.ಎಸ್.ಗೋವಿಂದೇಗೌಡ ಹೇಳಿದರು.

Advertisement

ಅವರು ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್‍ನ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಐಟಿ ಸಂಬಂಧಿ ಎರಡು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ  ಮಾತನಾಡಿದರು.ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ತನ್ನ ಅಧಿಪತ್ಯ ಸಾಧಿಸಿದೆ. ಐ.ಒ.ಟಿ. ಮತ್ತು ಮೊಬೈಲ್ ಅಪ್ಲಿಕೇಶನ್ ತಂತ್ರಜ್ಞಾನಗಳು ಜಾಗತಿಕ ಮಟ್ಟದಲ್ಲಿ ವೇಗವಾಗಿ ಬೆಳೆಯುತ್ತಿದೆ. ಇದು ಮನುಷ್ಯ ದಿನನಿತ್ಯ ಮಾಡುವ ಕೆಲಸಗಳನ್ನು ಮಾಡಲು ಶಕ್ತವಾಗಿದೆ, ಜೊತೆಗೆ ಪ್ರಪಂಚದಲ್ಲಿ ಉಂಟಾಗಿರುವ ಕಾರ್ಮಿಕರ ಕೊರತೆ ನೀಗಿಸಲು ಈ ಅಪ್ಲಿಕೇಶನ್‍ಗಳು ಸಹಕರಿಸುತ್ತವೆ. ಆದರೆ ಇದನ್ನು ಸಕಾರಣಕ್ಕಾಗಿ ಮಾತ್ರ ಬಳಸಬೇಕು ಎಂದರು.

ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಂಕರನಾರಾಯಣ ಭಟ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗಿಂತ ಮೊಬೈಲ್ ತಂತ್ರಜ್ಞಾನಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹೀಗಾಗಿ ಶಿಕ್ಷಕರು ಆಧುನಿಕ ವಸ್ತುಗಳ ಬಗೆಗೆ ವಿಶೇಷ ಜ್ಞಾನ ಪಡೆಯುವ ಅವಶ್ಯಕತೆ ಇದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ.ಟಿ. ಜಯರಾಮ್ ಭಟ್ ಮಾತನಾಡಿ, ತಂತ್ರಜ್ಞಾನದ ಕ್ರಾಂತಿಯಿಂದಾಗಿ ಜಗತ್ತಿನಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದೆ. ಜೊತೆಗೆ ಇದರಿಂದ ವಂಚನೆಗೊಳಗಾದ ಪ್ರಕರಣಗಳು ಬೆಳಕಿಗೆ ಬರುತ್ತಿದೆ, ಹೀಗಾಗಿ ವಿದ್ಯಾರ್ಥಿಗಳು ಇದನ್ನು ಸವಾಲಾಗಿ ಸ್ವೀಕರಿಸಿ ಇಂತಹ ಘಟನೆಗಳನ್ನು ತಡೆಯುವ ಪ್ರಯತ್ನಗಳನ್ನು ಮಾಡಬೇಕು ಎಂದರು.ಐ.ಕ್ಯು.ಎ.ಸಿ. ಘಟಕದ ಸಂಯೋಜಕ ಡಾ.ಹೆಚ್.ಜಿ.ಶ್ರೀಧರ್ ಮತ್ತು ಐ.ಟಿ. ಕ್ಲಬ್‍ನ ಸಂಯೋಜಕ ಗುರುಕಿರಣ್ ಭಟ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕ ಹಾಗೂ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಸುಚಿತ್ರಾ ವಂದಿಸಿದರು. ವಿದ್ಯಾರ್ಥಿನಿಯರಾದ ಲಿಖಿತಾ ಮತ್ತು ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.
.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

8 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

10 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

14 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

14 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

15 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

15 hours ago