Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ 2 ದಿನದ ರಾಜ್ಯಮಟ್ಟದ ಕಾರ್ಯಾಗಾರಕ್ಕೆ ಚಾಲನೆ

Share

ಪುತ್ತೂರು: ಪ್ರಪಂಚದಾದ್ಯಂತ ತಂತ್ರಜ್ಞಾನದ ಬೆಳವಣಿಗೆ ತ್ವರಿತಗತಿಯಲ್ಲಾಗುತ್ತಿದೆ, ಇದರಿಂದ ತಾಂತ್ರಿಕ ಕ್ಷೇತ್ರದಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡಲ್ಲಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಬಹುದು. ಜೊತೆಗೆಕೌಶಲ್ಯವನ್ನು ವೃದ್ಧಿಸುವ ಮುಖೇನ ಯಾವುದೇ ಕ್ಷೇತ್ರದಲ್ಲಾದರೂ ನುರಿತರಾಗಲು ಸಾಧ್ಯ ಎಂದು ವಿವೇಕಾನಂದ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಡಾ. ಎಂ.ಎಸ್.ಗೋವಿಂದೇಗೌಡ ಹೇಳಿದರು.

ಅವರು ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್‍ನ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಐಟಿ ಸಂಬಂಧಿ ಎರಡು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ  ಮಾತನಾಡಿದರು.ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ತನ್ನ ಅಧಿಪತ್ಯ ಸಾಧಿಸಿದೆ. ಐ.ಒ.ಟಿ. ಮತ್ತು ಮೊಬೈಲ್ ಅಪ್ಲಿಕೇಶನ್ ತಂತ್ರಜ್ಞಾನಗಳು ಜಾಗತಿಕ ಮಟ್ಟದಲ್ಲಿ ವೇಗವಾಗಿ ಬೆಳೆಯುತ್ತಿದೆ. ಇದು ಮನುಷ್ಯ ದಿನನಿತ್ಯ ಮಾಡುವ ಕೆಲಸಗಳನ್ನು ಮಾಡಲು ಶಕ್ತವಾಗಿದೆ, ಜೊತೆಗೆ ಪ್ರಪಂಚದಲ್ಲಿ ಉಂಟಾಗಿರುವ ಕಾರ್ಮಿಕರ ಕೊರತೆ ನೀಗಿಸಲು ಈ ಅಪ್ಲಿಕೇಶನ್‍ಗಳು ಸಹಕರಿಸುತ್ತವೆ. ಆದರೆ ಇದನ್ನು ಸಕಾರಣಕ್ಕಾಗಿ ಮಾತ್ರ ಬಳಸಬೇಕು ಎಂದರು.

ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಂಕರನಾರಾಯಣ ಭಟ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗಿಂತ ಮೊಬೈಲ್ ತಂತ್ರಜ್ಞಾನಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹೀಗಾಗಿ ಶಿಕ್ಷಕರು ಆಧುನಿಕ ವಸ್ತುಗಳ ಬಗೆಗೆ ವಿಶೇಷ ಜ್ಞಾನ ಪಡೆಯುವ ಅವಶ್ಯಕತೆ ಇದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ.ಟಿ. ಜಯರಾಮ್ ಭಟ್ ಮಾತನಾಡಿ, ತಂತ್ರಜ್ಞಾನದ ಕ್ರಾಂತಿಯಿಂದಾಗಿ ಜಗತ್ತಿನಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದೆ. ಜೊತೆಗೆ ಇದರಿಂದ ವಂಚನೆಗೊಳಗಾದ ಪ್ರಕರಣಗಳು ಬೆಳಕಿಗೆ ಬರುತ್ತಿದೆ, ಹೀಗಾಗಿ ವಿದ್ಯಾರ್ಥಿಗಳು ಇದನ್ನು ಸವಾಲಾಗಿ ಸ್ವೀಕರಿಸಿ ಇಂತಹ ಘಟನೆಗಳನ್ನು ತಡೆಯುವ ಪ್ರಯತ್ನಗಳನ್ನು ಮಾಡಬೇಕು ಎಂದರು.ಐ.ಕ್ಯು.ಎ.ಸಿ. ಘಟಕದ ಸಂಯೋಜಕ ಡಾ.ಹೆಚ್.ಜಿ.ಶ್ರೀಧರ್ ಮತ್ತು ಐ.ಟಿ. ಕ್ಲಬ್‍ನ ಸಂಯೋಜಕ ಗುರುಕಿರಣ್ ಭಟ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕ ಹಾಗೂ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಸುಚಿತ್ರಾ ವಂದಿಸಿದರು. ವಿದ್ಯಾರ್ಥಿನಿಯರಾದ ಲಿಖಿತಾ ಮತ್ತು ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.
.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

3 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

3 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

6 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

15 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

16 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

22 hours ago