Advertisement
Categories: ಮಾಹಿತಿ

ವಿವೇಕಾನಂದ ಕಾಲೇಜು: ಹಿರಿಯ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’ ಕಾರ್ಯಕ್ರಮ

Share

ಪುತ್ತೂರು: ವಿದ್ಯಾರ್ಥಿಗಳಾಗಿದ್ದಾಗ ಸ್ನೇಹಿತರ ಸಂಘ ಹೆಚ್ಚಾಗಿರುತ್ತದೆ. ಅದರಂತೆ ಶಿಕ್ಷಕರೊಂದಿಗಿನ ಸಂಬಂಧ ದಿನ ಕಳೆದಂತೆ ದೂರವಾಗುತ್ತದೆ. ಇಂತಹ ಸಂದರ್ಭದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಏರ್ಪಡಿಸಿದ ಸ್ನೇಹ ಸಮ್ಮಿಲನದಂತಹ ಕಾರ್ಯಕ್ರಮಗಳು ಬಾಲ್ಯದ ನೆನಪಿನ ಬುತ್ತಿಯನ್ನು ತೆರೆದಿಡುತ್ತದೆ. ಆ ಮೂಲಕ ಸ್ನೇಹಿತರನ್ನು, ಶಿಕ್ಷಕರನ್ನು ಪುನಃ ಭೇಟಿ ಮಾಡುವ ಭಾಗ್ಯ ದೊರಕುವಂತೆ ಮಾಡಿದೆ ಎಂದು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಶ್ರೀಧರ್ ಭಟ್ ಹೇಳಿದರು.
ಅವರು ವಿವೇಕಾನಂದ ಪದವಿ ಕಾಲೇಜಿನ 2007 ಸಾಲಿನ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶನಿವಾರ ಮಾತನಾಡಿದರು.
ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಮಾಧವ ಭಟ್ ಮಾತನಾಡಿ, ಮನಸ್ಸಿನಲ್ಲಿ ಹಚ್ಚ ಹಸಿರಾಗಿರುವ ಅನೇಕ ನೆನಪಿನ ಕಥೆಗಳಲ್ಲಿ ಕಾಲೇಜು ಜೀವನವೂ ಒಂದು. ಇಂದು ವೃತ್ತಿ ನಿರ್ವಹಿಸುತ್ತಿರುವ ಅನೇಕ ಮಂದಿ ತಮ್ಮ ಸ್ನೇಹಿತರನ್ನು ಮತ್ತು ಶಿಕ್ಷಕರನ್ನು ಒಂದೆಡೆ ಸೇರಿ ಹಿಂದಿನ ಕಾಲೇಜಿನ ಕಥೆಯನ್ನು ನೆನಪಿಸಿಕೊಳ್ಳು ವೇದಿಕೆ ನಮ್ಮ ಈ ಸಮ್ಮಿಲನ ಎಂದು ಅಭಿಪ್ರಾಯಪಟ್ಟರು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಜೀವನದಾಸ್, ಪದವಿ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ವೇದವ್ಯಾಸ, ಐಕ್ಯುಎಸಿ ಸಂಯೋಜಕ ಡಾ. ಶ್ರೀಧರ್ ಹೆಚ್.ಜಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳು ತಾವು ವಿದ್ಯಾರ್ಥಿಗಳಾಗಿದ್ದಾಗಿನ ಕಾಲೇಜಿನ ನೆನಪು ಹಾಗೂ ಅನುಭವವನ್ನು ಹಂಚಿಕೊಂಡರು.
ಕಾರ್ಯಕ್ರಮದ ಸಂಯೋಜಕ, ಹಿರಿಯ ವಿದ್ಯಾರ್ಥಿ ವಿಕ್ರಮ್ ಸ್ವಾಗತಿಸಿದರು. ಲಕ್ಷ್ಮೀ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

6 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

18 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

20 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago