Advertisement
ಸುದ್ದಿಗಳು

ವಿವೇಕಾನಂದ ಕಾಲೇಜು: 50ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು: ಪ್ರೊ. ಆರ್. ವೇದವ್ಯಾಸ

Share

ಪುತ್ತೂರು: ಜೀವನ ಎಣಿಸಿದಂತಲ್ಲ, ಏರು-ಪೇರು, ಕಷ್ಟ-ಸುಖ ಇದ್ದೇ ಇರುತ್ತದೆ. ದೊರಕಿರುವ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಆರ್. ವೇದವ್ಯಾಸ ಹೇಳಿದರು.

ಅವರು ವಿವೇಕಾನಂದ ಕಾಲೇಜಿನ ಐಕ್ಯುಎಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ 50ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಬುಧವಾರ ಮಾತನಾಡಿದರು.

ಸಮಾಜದಲ್ಲಿ ಆರ್ಥಿಕ, ನೈತಿಕ, ಸಾಮಾಜಿಕ ಧ್ವಂದ್ವಗಳಿರುತ್ತದೆ. ಎನ್‍ಎಸ್‍ಎಸ್ ತನ್ನೊಳಗಿರುವ ಮೌಲ್ಯ, ನೈತಿಕತೆಯನ್ನು ತಿಳಿಸುವುದರ ಮೂಲಕ ಯಾವುದೇ ಸಮಯದಲ್ಲಿ ಪರೋಪಕಾರವನ್ನು ಗ್ರಹಿಸಿಕೊಳ್ಳುತ್ತದೆ. ಅದಲ್ಲದೇ ಉತ್ತಮ ರೀತಿಯಿಂದ ಉನ್ನತ ಮಟ್ಟಕ್ಕೆ ತಲುಪಲು ಎನ್‍ಎಸ್‍ಎಸ್ ಸಹಕಾರಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಒಂದು ಕಾರ್ಯವನ್ನು ಸತತ ಪ್ರಯತ್ನಗಳಿಂದ ಸದೃಢವಾಗಿ ಯಶಸ್ವಿಗೊಳಿಸಬಹುದು. ನಾವು ಹಣ ಗಳಿಸಿದರೆ ಮಾತ್ರ ದೊಡ್ಡ ವ್ಯಕ್ತಿಗಳಲ್ಲ. ಒಂದು ಸಣ್ಣ ಸಹಕಾರ, ಕರುಣೆ, ಪ್ರೀತಿ ತೋರಿಸದರೆ ಅದು ವ್ಯಕ್ತಿಯ ಪಡೆದುಕೊಳ್ಳುವ ಉತ್ತಮ ಮೌಲ್ಯ. ಪರರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಉಪಕಾರವು ದೊಡ್ಡ ರೀತಿಯದ್ದಾಗಿರಬೇಕಾಗಿಲ್ಲ. ಆದರೆ ಅದು ಮನಸ್ಸಿನಿಂದ ಬಂದಿರಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಎನ್‍ಎಸ್‍ಎಸ್ ಸಂಯೋಜಕಿ ವಿದ್ಯಾ ಕೆ.ಎಸ್. ಉಪಸ್ಥಿತರಿದ್ದರು. ಸ್ವಯಂ ಸೇವಕಿ ಚೈತ್ರಾ, ಹರ್ಷಿತಾ, ವಿಶಾಖ ಭಾವೈಕ್ಯ ಗೀತೆ ಹಾಡಿದರು. ರಾಷ್ಟ್ರೀಯ ಸೇವಾ ಯೋಜನಾ ಸಂಯೋಜಕ ಶ್ರೀನಾಥ್ ಸ್ವಾಗತಿಸಿದರು. ಸಂಘದ ನಾಯಕ ಆಕಾಶ್ ಎನ್. ಶೆಟ್ಟಿ ವಂದಿಸಿ, ಚರಣ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

8 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

8 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

11 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

15 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

15 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago