ಸುದ್ದಿಗಳು

ವಿವೇಕಾನಂದ ಕಾಲೇಜು: 50ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು: ಪ್ರೊ. ಆರ್. ವೇದವ್ಯಾಸ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಜೀವನ ಎಣಿಸಿದಂತಲ್ಲ, ಏರು-ಪೇರು, ಕಷ್ಟ-ಸುಖ ಇದ್ದೇ ಇರುತ್ತದೆ. ದೊರಕಿರುವ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಆರ್. ವೇದವ್ಯಾಸ ಹೇಳಿದರು.

Advertisement
Advertisement

ಅವರು ವಿವೇಕಾನಂದ ಕಾಲೇಜಿನ ಐಕ್ಯುಎಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ 50ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಬುಧವಾರ ಮಾತನಾಡಿದರು.

ಸಮಾಜದಲ್ಲಿ ಆರ್ಥಿಕ, ನೈತಿಕ, ಸಾಮಾಜಿಕ ಧ್ವಂದ್ವಗಳಿರುತ್ತದೆ. ಎನ್‍ಎಸ್‍ಎಸ್ ತನ್ನೊಳಗಿರುವ ಮೌಲ್ಯ, ನೈತಿಕತೆಯನ್ನು ತಿಳಿಸುವುದರ ಮೂಲಕ ಯಾವುದೇ ಸಮಯದಲ್ಲಿ ಪರೋಪಕಾರವನ್ನು ಗ್ರಹಿಸಿಕೊಳ್ಳುತ್ತದೆ. ಅದಲ್ಲದೇ ಉತ್ತಮ ರೀತಿಯಿಂದ ಉನ್ನತ ಮಟ್ಟಕ್ಕೆ ತಲುಪಲು ಎನ್‍ಎಸ್‍ಎಸ್ ಸಹಕಾರಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಒಂದು ಕಾರ್ಯವನ್ನು ಸತತ ಪ್ರಯತ್ನಗಳಿಂದ ಸದೃಢವಾಗಿ ಯಶಸ್ವಿಗೊಳಿಸಬಹುದು. ನಾವು ಹಣ ಗಳಿಸಿದರೆ ಮಾತ್ರ ದೊಡ್ಡ ವ್ಯಕ್ತಿಗಳಲ್ಲ. ಒಂದು ಸಣ್ಣ ಸಹಕಾರ, ಕರುಣೆ, ಪ್ರೀತಿ ತೋರಿಸದರೆ ಅದು ವ್ಯಕ್ತಿಯ ಪಡೆದುಕೊಳ್ಳುವ ಉತ್ತಮ ಮೌಲ್ಯ. ಪರರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಉಪಕಾರವು ದೊಡ್ಡ ರೀತಿಯದ್ದಾಗಿರಬೇಕಾಗಿಲ್ಲ. ಆದರೆ ಅದು ಮನಸ್ಸಿನಿಂದ ಬಂದಿರಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಎನ್‍ಎಸ್‍ಎಸ್ ಸಂಯೋಜಕಿ ವಿದ್ಯಾ ಕೆ.ಎಸ್. ಉಪಸ್ಥಿತರಿದ್ದರು. ಸ್ವಯಂ ಸೇವಕಿ ಚೈತ್ರಾ, ಹರ್ಷಿತಾ, ವಿಶಾಖ ಭಾವೈಕ್ಯ ಗೀತೆ ಹಾಡಿದರು. ರಾಷ್ಟ್ರೀಯ ಸೇವಾ ಯೋಜನಾ ಸಂಯೋಜಕ ಶ್ರೀನಾಥ್ ಸ್ವಾಗತಿಸಿದರು. ಸಂಘದ ನಾಯಕ ಆಕಾಶ್ ಎನ್. ಶೆಟ್ಟಿ ವಂದಿಸಿ, ಚರಣ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

10 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago