Advertisement
ಸುದ್ದಿಗಳು

ವಿವೇಕಾನಂದ ಕಾಲೇಜು: 50ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು: ಪ್ರೊ. ಆರ್. ವೇದವ್ಯಾಸ

Share

ಪುತ್ತೂರು: ಜೀವನ ಎಣಿಸಿದಂತಲ್ಲ, ಏರು-ಪೇರು, ಕಷ್ಟ-ಸುಖ ಇದ್ದೇ ಇರುತ್ತದೆ. ದೊರಕಿರುವ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಆರ್. ವೇದವ್ಯಾಸ ಹೇಳಿದರು.

Advertisement
Advertisement
Advertisement
Advertisement

ಅವರು ವಿವೇಕಾನಂದ ಕಾಲೇಜಿನ ಐಕ್ಯುಎಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ 50ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಬುಧವಾರ ಮಾತನಾಡಿದರು.

Advertisement

ಸಮಾಜದಲ್ಲಿ ಆರ್ಥಿಕ, ನೈತಿಕ, ಸಾಮಾಜಿಕ ಧ್ವಂದ್ವಗಳಿರುತ್ತದೆ. ಎನ್‍ಎಸ್‍ಎಸ್ ತನ್ನೊಳಗಿರುವ ಮೌಲ್ಯ, ನೈತಿಕತೆಯನ್ನು ತಿಳಿಸುವುದರ ಮೂಲಕ ಯಾವುದೇ ಸಮಯದಲ್ಲಿ ಪರೋಪಕಾರವನ್ನು ಗ್ರಹಿಸಿಕೊಳ್ಳುತ್ತದೆ. ಅದಲ್ಲದೇ ಉತ್ತಮ ರೀತಿಯಿಂದ ಉನ್ನತ ಮಟ್ಟಕ್ಕೆ ತಲುಪಲು ಎನ್‍ಎಸ್‍ಎಸ್ ಸಹಕಾರಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಒಂದು ಕಾರ್ಯವನ್ನು ಸತತ ಪ್ರಯತ್ನಗಳಿಂದ ಸದೃಢವಾಗಿ ಯಶಸ್ವಿಗೊಳಿಸಬಹುದು. ನಾವು ಹಣ ಗಳಿಸಿದರೆ ಮಾತ್ರ ದೊಡ್ಡ ವ್ಯಕ್ತಿಗಳಲ್ಲ. ಒಂದು ಸಣ್ಣ ಸಹಕಾರ, ಕರುಣೆ, ಪ್ರೀತಿ ತೋರಿಸದರೆ ಅದು ವ್ಯಕ್ತಿಯ ಪಡೆದುಕೊಳ್ಳುವ ಉತ್ತಮ ಮೌಲ್ಯ. ಪರರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಉಪಕಾರವು ದೊಡ್ಡ ರೀತಿಯದ್ದಾಗಿರಬೇಕಾಗಿಲ್ಲ. ಆದರೆ ಅದು ಮನಸ್ಸಿನಿಂದ ಬಂದಿರಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಎನ್‍ಎಸ್‍ಎಸ್ ಸಂಯೋಜಕಿ ವಿದ್ಯಾ ಕೆ.ಎಸ್. ಉಪಸ್ಥಿತರಿದ್ದರು. ಸ್ವಯಂ ಸೇವಕಿ ಚೈತ್ರಾ, ಹರ್ಷಿತಾ, ವಿಶಾಖ ಭಾವೈಕ್ಯ ಗೀತೆ ಹಾಡಿದರು. ರಾಷ್ಟ್ರೀಯ ಸೇವಾ ಯೋಜನಾ ಸಂಯೋಜಕ ಶ್ರೀನಾಥ್ ಸ್ವಾಗತಿಸಿದರು. ಸಂಘದ ನಾಯಕ ಆಕಾಶ್ ಎನ್. ಶೆಟ್ಟಿ ವಂದಿಸಿ, ಚರಣ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

5 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

5 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

5 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago