ಸುದ್ದಿಗಳು

ವಿವೇಕಾನಂದ ಜಯಂತಿ ಪ್ರಯುಕ್ತ ವಿಷಯಾಧಾರಿತ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸಮಾಜಕ್ಕೆ ಶಾಂತಿ, ಸೌಹಾರ್ದತೆ, ಸಮಾನತೆಯನ್ನು ಸಾರಿದ, ಯುವ ಸಮುದಾಯಕ್ಕೆ ದಾರಿದೀಪವಾದ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಅಭಿಪ್ರಾಯಪಟ್ಟರು.

Advertisement
Advertisement

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್ ಕ್ರಾಸ್ ಘಟಕ ಹಾಗೂ ವಿಕ್ರಮ ಯುವಕ ಮಂಡಲ ಜಯನಗರ ಇವುಗಳ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಪ್ರಯುಕ್ತ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಹಮ್ಮಿಕೊಂಡ ವಿಷಯಾಧಾರಿತ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮ `ಅರಿವಿನಿಂದ ಪ್ರಗತಿಯೆಡೆಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ವಧರ್ಮ ಸಮನ್ವಯತೆಯನ್ನು ಸಾರಿದ ವಿವೇಕಾನಂದರು ಯುವಕರಿಗೆ ಮಾರ್ಗದರ್ಶಕರಾದವರು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಕೆ ಗಿರಿಧರಗೌಡ ಮಾತನಾಡಿ ದೇಶಕಟ್ಟುವ ಶಕ್ತಿ ಯುವಕರಲ್ಲಿದೆ, ಯುವಕರು ಮನಸ್ಸು ಮಾಡಿದರೆ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದರು. ಕೆ.ವಿ.ಜಿ ಕ್ಯಾಂಪಸ್‍ನ ವಿದ್ಯಾರ್ಥಿ ಕ್ಷೇಮಾಧಿಕಾರಿ ಜವರೇಗೌಡ.ಡಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್‍ಪೇಟ್, ವಿಕ್ರಮಯುವ ಮಂಡಲದ ಪೂರ್ವಾಧ್ಯಕ್ಷ ಸುರೇಂದ್ರ ಕಾಮತ್, ನೆಹರು ಯುವಕೇಂದ್ರ ದಕ್ಷಿಣಕನ್ನಡ ಜಿಲ್ಲೆಯ ನಾಮ ನಿರ್ದೇಶಿತ ಸದಸ್ಯ ಕಿಶನ್ ಜಬಳೆ, ವಿಕ್ರಮ ಯುವಕ ಮಂಡಲದ ಅಧ್ಯಕ್ಷ ಪ್ರಸನ್ನ ಮಾತನಾಡಿದರು. ಯುವರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜೇಸಿ ವಲಯ ತರಬೇತುದಾರ ಚಂದ್ರಶೇಖರ ಬಿಳಿನೆಲೆ, ಶಿಕ್ಷಣ ಸಂಯೋಜಕ ಡಾ.ಸುಂದರಕೇನಾಜೆ, ಭವಾನಿಶಂಕರ ಅಡ್ತಲೆ, ಸಾಯಿರಾಂ ಸುಳ್ಯ ತರಬೇತುದಾರರಾಗಿದ್ದರು. ಮೌನ,ತೇಜಸ್ವಿನಿ, ರಚನಾ ಪ್ರಾರ್ಥಿಸಿದರು. ಕುಲದೀಪ್ ಸ್ವಾಗತಿಸಿ, ಅಶ್ವಿತಾ ವಂದಿಸಿದರು. ಜಯಮಾಲ ಕೆ.ವಿ ಕಾರ್ಯಕ್ರಮ ನಿರೂಪಿಸಿದರು. ಯುವ ರೆಡ್‍ಕ್ರಾಸ್ ಘಟಕ ನಾಯಕರಾದ ಭುವನ್ ಪಿ,ಕುಮುದಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

8 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

15 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

22 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

2 days ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago