Advertisement
ಸುದ್ದಿಗಳು

ವಿವೇಕಾನಂದ ಜಯಂತಿ ಪ್ರಯುಕ್ತ ವಿಷಯಾಧಾರಿತ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮ

Share

ಸುಳ್ಯ: ಸಮಾಜಕ್ಕೆ ಶಾಂತಿ, ಸೌಹಾರ್ದತೆ, ಸಮಾನತೆಯನ್ನು ಸಾರಿದ, ಯುವ ಸಮುದಾಯಕ್ಕೆ ದಾರಿದೀಪವಾದ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಅಭಿಪ್ರಾಯಪಟ್ಟರು.

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್ ಕ್ರಾಸ್ ಘಟಕ ಹಾಗೂ ವಿಕ್ರಮ ಯುವಕ ಮಂಡಲ ಜಯನಗರ ಇವುಗಳ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಪ್ರಯುಕ್ತ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಹಮ್ಮಿಕೊಂಡ ವಿಷಯಾಧಾರಿತ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮ `ಅರಿವಿನಿಂದ ಪ್ರಗತಿಯೆಡೆಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ವಧರ್ಮ ಸಮನ್ವಯತೆಯನ್ನು ಸಾರಿದ ವಿವೇಕಾನಂದರು ಯುವಕರಿಗೆ ಮಾರ್ಗದರ್ಶಕರಾದವರು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಕೆ ಗಿರಿಧರಗೌಡ ಮಾತನಾಡಿ ದೇಶಕಟ್ಟುವ ಶಕ್ತಿ ಯುವಕರಲ್ಲಿದೆ, ಯುವಕರು ಮನಸ್ಸು ಮಾಡಿದರೆ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದರು. ಕೆ.ವಿ.ಜಿ ಕ್ಯಾಂಪಸ್‍ನ ವಿದ್ಯಾರ್ಥಿ ಕ್ಷೇಮಾಧಿಕಾರಿ ಜವರೇಗೌಡ.ಡಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್‍ಪೇಟ್, ವಿಕ್ರಮಯುವ ಮಂಡಲದ ಪೂರ್ವಾಧ್ಯಕ್ಷ ಸುರೇಂದ್ರ ಕಾಮತ್, ನೆಹರು ಯುವಕೇಂದ್ರ ದಕ್ಷಿಣಕನ್ನಡ ಜಿಲ್ಲೆಯ ನಾಮ ನಿರ್ದೇಶಿತ ಸದಸ್ಯ ಕಿಶನ್ ಜಬಳೆ, ವಿಕ್ರಮ ಯುವಕ ಮಂಡಲದ ಅಧ್ಯಕ್ಷ ಪ್ರಸನ್ನ ಮಾತನಾಡಿದರು. ಯುವರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜೇಸಿ ವಲಯ ತರಬೇತುದಾರ ಚಂದ್ರಶೇಖರ ಬಿಳಿನೆಲೆ, ಶಿಕ್ಷಣ ಸಂಯೋಜಕ ಡಾ.ಸುಂದರಕೇನಾಜೆ, ಭವಾನಿಶಂಕರ ಅಡ್ತಲೆ, ಸಾಯಿರಾಂ ಸುಳ್ಯ ತರಬೇತುದಾರರಾಗಿದ್ದರು. ಮೌನ,ತೇಜಸ್ವಿನಿ, ರಚನಾ ಪ್ರಾರ್ಥಿಸಿದರು. ಕುಲದೀಪ್ ಸ್ವಾಗತಿಸಿ, ಅಶ್ವಿತಾ ವಂದಿಸಿದರು. ಜಯಮಾಲ ಕೆ.ವಿ ಕಾರ್ಯಕ್ರಮ ನಿರೂಪಿಸಿದರು. ಯುವ ರೆಡ್‍ಕ್ರಾಸ್ ಘಟಕ ನಾಯಕರಾದ ಭುವನ್ ಪಿ,ಕುಮುದಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

1 hour ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

6 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

12 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

2 days ago