ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮ

December 14, 2019
9:05 AM

ಪುತ್ತೂರು: ಡಿ. 26 ರಂದು ನಡೆಯುವ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಎ. ಪಿ. ಭಟ್, ಗ್ರಹಣವು ಒಂದು ಬಾಹ್ಯಕಾಶದ ವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ , ಒಂದು ಬಗೆಯ ಸಂಯೋಗದ ರಚನೆಯಾಗುತ್ತದೆ. ಗ್ರಹಣ ಪದವನ್ನು ಹಲವು ವೇಳೆ ಸೂರ್ಯಗ್ರಹಣ ಅಥವಾ ಚಂದ್ರಗ್ರಹಣ ಎಂದು ವಿವರಿಸಲು ಬಳಸಲಾಗುತ್ತದೆ. ಇಂತಹ ಪ್ರಾಕೃತಿಕ ವಿದ್ಯಾಮಾನಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿತುಕೊಳ್ಳಬೇಕು ಎಂದರು.

ಜೀವನಚಕ್ರದಲ್ಲಿ ಸಂಶೋಧನೆಯ ಕ್ಷಣಗಳು ಬಹಳ ಮುಖ್ಯ ಅದು ಮುಗಿಯದ ಕಲಿಕೆ. ಯುವಜನಾಂಗ ಸಂಶೋಧನೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಅನುಮಾನಗಳನ್ನು ಸ್ವ ಪ್ರಯೋಗಗಳ ಮೂಲಕ ಪರಿಹರಿಸಿಕೊಳ್ಳುವ ಪ್ರವೃತ್ತಿ ಯುವಜನಾಂಗದಲ್ಲಿ ಬೆಳೆಯಬೇಕು. ವಿಜ್ಞಾನ ಎಂಬುದು ಸಾಗರವಿದ್ದಂತೆ. ಓದಿದಷ್ಟು ಮುಗಿಯದ ಪುಸ್ತಕವಿದ್ದಂತೆ. ನಮ್ಮ ಜ್ಞಾನವನ್ನು ವಿಜ್ಞಾನವೆಂಬ ಮಹಾನ್ ಸಾಗರಕ್ಕೆ ವಿಸ್ತರಿಸಬೇಕು. ಹೊಸತನ್ನು ಅನ್ವೇಷಿಸುವುದು ನಮ್ಮ ಹವ್ಯಾಸವಾಗಬೇಕು ಎಂದರು. ಬಳಿಕ ಗ್ರಹಣ ನಡೆಯುವ ಬಗೆ ಮತ್ತು ಮುನ್ನೆಚ್ಚರಿಸಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.

ಉಪನ್ಯಾಸಕಿ ದಯಾಮಣಿ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror