Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮ

Share

ಪುತ್ತೂರು: ಡಿ. 26 ರಂದು ನಡೆಯುವ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

Advertisement
Advertisement
Advertisement
Advertisement

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಎ. ಪಿ. ಭಟ್, ಗ್ರಹಣವು ಒಂದು ಬಾಹ್ಯಕಾಶದ ವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ , ಒಂದು ಬಗೆಯ ಸಂಯೋಗದ ರಚನೆಯಾಗುತ್ತದೆ. ಗ್ರಹಣ ಪದವನ್ನು ಹಲವು ವೇಳೆ ಸೂರ್ಯಗ್ರಹಣ ಅಥವಾ ಚಂದ್ರಗ್ರಹಣ ಎಂದು ವಿವರಿಸಲು ಬಳಸಲಾಗುತ್ತದೆ. ಇಂತಹ ಪ್ರಾಕೃತಿಕ ವಿದ್ಯಾಮಾನಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿತುಕೊಳ್ಳಬೇಕು ಎಂದರು.

Advertisement

ಜೀವನಚಕ್ರದಲ್ಲಿ ಸಂಶೋಧನೆಯ ಕ್ಷಣಗಳು ಬಹಳ ಮುಖ್ಯ ಅದು ಮುಗಿಯದ ಕಲಿಕೆ. ಯುವಜನಾಂಗ ಸಂಶೋಧನೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಅನುಮಾನಗಳನ್ನು ಸ್ವ ಪ್ರಯೋಗಗಳ ಮೂಲಕ ಪರಿಹರಿಸಿಕೊಳ್ಳುವ ಪ್ರವೃತ್ತಿ ಯುವಜನಾಂಗದಲ್ಲಿ ಬೆಳೆಯಬೇಕು. ವಿಜ್ಞಾನ ಎಂಬುದು ಸಾಗರವಿದ್ದಂತೆ. ಓದಿದಷ್ಟು ಮುಗಿಯದ ಪುಸ್ತಕವಿದ್ದಂತೆ. ನಮ್ಮ ಜ್ಞಾನವನ್ನು ವಿಜ್ಞಾನವೆಂಬ ಮಹಾನ್ ಸಾಗರಕ್ಕೆ ವಿಸ್ತರಿಸಬೇಕು. ಹೊಸತನ್ನು ಅನ್ವೇಷಿಸುವುದು ನಮ್ಮ ಹವ್ಯಾಸವಾಗಬೇಕು ಎಂದರು. ಬಳಿಕ ಗ್ರಹಣ ನಡೆಯುವ ಬಗೆ ಮತ್ತು ಮುನ್ನೆಚ್ಚರಿಸಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.

ಉಪನ್ಯಾಸಕಿ ದಯಾಮಣಿ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

20 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago