ಪುತ್ತೂರು: ಡಿ. 26 ರಂದು ನಡೆಯುವ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಎ. ಪಿ. ಭಟ್, ಗ್ರಹಣವು ಒಂದು ಬಾಹ್ಯಕಾಶದ ವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ , ಒಂದು ಬಗೆಯ ಸಂಯೋಗದ ರಚನೆಯಾಗುತ್ತದೆ. ಗ್ರಹಣ ಪದವನ್ನು ಹಲವು ವೇಳೆ ಸೂರ್ಯಗ್ರಹಣ ಅಥವಾ ಚಂದ್ರಗ್ರಹಣ ಎಂದು ವಿವರಿಸಲು ಬಳಸಲಾಗುತ್ತದೆ. ಇಂತಹ ಪ್ರಾಕೃತಿಕ ವಿದ್ಯಾಮಾನಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿತುಕೊಳ್ಳಬೇಕು ಎಂದರು.
ಜೀವನಚಕ್ರದಲ್ಲಿ ಸಂಶೋಧನೆಯ ಕ್ಷಣಗಳು ಬಹಳ ಮುಖ್ಯ ಅದು ಮುಗಿಯದ ಕಲಿಕೆ. ಯುವಜನಾಂಗ ಸಂಶೋಧನೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಅನುಮಾನಗಳನ್ನು ಸ್ವ ಪ್ರಯೋಗಗಳ ಮೂಲಕ ಪರಿಹರಿಸಿಕೊಳ್ಳುವ ಪ್ರವೃತ್ತಿ ಯುವಜನಾಂಗದಲ್ಲಿ ಬೆಳೆಯಬೇಕು. ವಿಜ್ಞಾನ ಎಂಬುದು ಸಾಗರವಿದ್ದಂತೆ. ಓದಿದಷ್ಟು ಮುಗಿಯದ ಪುಸ್ತಕವಿದ್ದಂತೆ. ನಮ್ಮ ಜ್ಞಾನವನ್ನು ವಿಜ್ಞಾನವೆಂಬ ಮಹಾನ್ ಸಾಗರಕ್ಕೆ ವಿಸ್ತರಿಸಬೇಕು. ಹೊಸತನ್ನು ಅನ್ವೇಷಿಸುವುದು ನಮ್ಮ ಹವ್ಯಾಸವಾಗಬೇಕು ಎಂದರು. ಬಳಿಕ ಗ್ರಹಣ ನಡೆಯುವ ಬಗೆ ಮತ್ತು ಮುನ್ನೆಚ್ಚರಿಸಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.
ಉಪನ್ಯಾಸಕಿ ದಯಾಮಣಿ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಭಾಗವಹಿಸಿದ್ದರು.
https://youtu.be/_3oJulDTrjI?si=aPComSJYcu2B1sEJ
https://youtu.be/Ib0MXjaQy6I?si=OmzjryKVT7d-aHdZ
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…