Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮ

Share

ಪುತ್ತೂರು: ಡಿ. 26 ರಂದು ನಡೆಯುವ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಎ. ಪಿ. ಭಟ್, ಗ್ರಹಣವು ಒಂದು ಬಾಹ್ಯಕಾಶದ ವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ , ಒಂದು ಬಗೆಯ ಸಂಯೋಗದ ರಚನೆಯಾಗುತ್ತದೆ. ಗ್ರಹಣ ಪದವನ್ನು ಹಲವು ವೇಳೆ ಸೂರ್ಯಗ್ರಹಣ ಅಥವಾ ಚಂದ್ರಗ್ರಹಣ ಎಂದು ವಿವರಿಸಲು ಬಳಸಲಾಗುತ್ತದೆ. ಇಂತಹ ಪ್ರಾಕೃತಿಕ ವಿದ್ಯಾಮಾನಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿತುಕೊಳ್ಳಬೇಕು ಎಂದರು.

ಜೀವನಚಕ್ರದಲ್ಲಿ ಸಂಶೋಧನೆಯ ಕ್ಷಣಗಳು ಬಹಳ ಮುಖ್ಯ ಅದು ಮುಗಿಯದ ಕಲಿಕೆ. ಯುವಜನಾಂಗ ಸಂಶೋಧನೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಅನುಮಾನಗಳನ್ನು ಸ್ವ ಪ್ರಯೋಗಗಳ ಮೂಲಕ ಪರಿಹರಿಸಿಕೊಳ್ಳುವ ಪ್ರವೃತ್ತಿ ಯುವಜನಾಂಗದಲ್ಲಿ ಬೆಳೆಯಬೇಕು. ವಿಜ್ಞಾನ ಎಂಬುದು ಸಾಗರವಿದ್ದಂತೆ. ಓದಿದಷ್ಟು ಮುಗಿಯದ ಪುಸ್ತಕವಿದ್ದಂತೆ. ನಮ್ಮ ಜ್ಞಾನವನ್ನು ವಿಜ್ಞಾನವೆಂಬ ಮಹಾನ್ ಸಾಗರಕ್ಕೆ ವಿಸ್ತರಿಸಬೇಕು. ಹೊಸತನ್ನು ಅನ್ವೇಷಿಸುವುದು ನಮ್ಮ ಹವ್ಯಾಸವಾಗಬೇಕು ಎಂದರು. ಬಳಿಕ ಗ್ರಹಣ ನಡೆಯುವ ಬಗೆ ಮತ್ತು ಮುನ್ನೆಚ್ಚರಿಸಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.

ಉಪನ್ಯಾಸಕಿ ದಯಾಮಣಿ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

3 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

9 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

9 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago