Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮ

Share

ಪುತ್ತೂರು: ಡಿ. 26 ರಂದು ನಡೆಯುವ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಎ. ಪಿ. ಭಟ್, ಗ್ರಹಣವು ಒಂದು ಬಾಹ್ಯಕಾಶದ ವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ , ಒಂದು ಬಗೆಯ ಸಂಯೋಗದ ರಚನೆಯಾಗುತ್ತದೆ. ಗ್ರಹಣ ಪದವನ್ನು ಹಲವು ವೇಳೆ ಸೂರ್ಯಗ್ರಹಣ ಅಥವಾ ಚಂದ್ರಗ್ರಹಣ ಎಂದು ವಿವರಿಸಲು ಬಳಸಲಾಗುತ್ತದೆ. ಇಂತಹ ಪ್ರಾಕೃತಿಕ ವಿದ್ಯಾಮಾನಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿತುಕೊಳ್ಳಬೇಕು ಎಂದರು.

ಜೀವನಚಕ್ರದಲ್ಲಿ ಸಂಶೋಧನೆಯ ಕ್ಷಣಗಳು ಬಹಳ ಮುಖ್ಯ ಅದು ಮುಗಿಯದ ಕಲಿಕೆ. ಯುವಜನಾಂಗ ಸಂಶೋಧನೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಅನುಮಾನಗಳನ್ನು ಸ್ವ ಪ್ರಯೋಗಗಳ ಮೂಲಕ ಪರಿಹರಿಸಿಕೊಳ್ಳುವ ಪ್ರವೃತ್ತಿ ಯುವಜನಾಂಗದಲ್ಲಿ ಬೆಳೆಯಬೇಕು. ವಿಜ್ಞಾನ ಎಂಬುದು ಸಾಗರವಿದ್ದಂತೆ. ಓದಿದಷ್ಟು ಮುಗಿಯದ ಪುಸ್ತಕವಿದ್ದಂತೆ. ನಮ್ಮ ಜ್ಞಾನವನ್ನು ವಿಜ್ಞಾನವೆಂಬ ಮಹಾನ್ ಸಾಗರಕ್ಕೆ ವಿಸ್ತರಿಸಬೇಕು. ಹೊಸತನ್ನು ಅನ್ವೇಷಿಸುವುದು ನಮ್ಮ ಹವ್ಯಾಸವಾಗಬೇಕು ಎಂದರು. ಬಳಿಕ ಗ್ರಹಣ ನಡೆಯುವ ಬಗೆ ಮತ್ತು ಮುನ್ನೆಚ್ಚರಿಸಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.

ಉಪನ್ಯಾಸಕಿ ದಯಾಮಣಿ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

9 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

10 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

11 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

17 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

23 hours ago