Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ವಿನೂತನ ಪ್ರಯತ್ನ | ಪಿಯುಸಿಗೆ ಸೇರಲಿಚ್ಚಿಸಿರುವ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದಲ್ಲಿ ಉಚಿತ ಯುಟ್ಯೂಬ್ ಕ್ಲಾಸ್ ಆಯೋಜನೆ

Share

ಪುತ್ತೂರು: ಕೊರೋನಾ ವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣದ ಬಹು ಅಮೂಲ್ಯ ಸಮಯವನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಇನ್ನಷ್ಟು ಸಂಕಷ್ಟಕ್ಕೀಡಾಗದಂತೆ ಮಾಡಲು ವಿವೇಕಾನಂದ ಸಂಸ್ಥೆಯು ಮುಂದಾಗಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಗಿಸಿದ ಮತ್ತು ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರಥಮ ಪಿಯುಸಿಗೆ ಸೇರಲಿಚ್ಚಿಸಿರುವ ವಿದ್ಯಾರ್ಥಿಗಳಿಗೆ ಜುಲೈ 13 ರಿಂದ ವಿಜ್ಞಾನ ವಿಭಾಗದಲ್ಲಿ ಉಚಿತ ಯುಟ್ಯೂಬ್ ಕ್ಲಾಸ್ ಗಳನ್ನು ಆಯೋಜಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಅವಕಾಶವನ್ನು ಒದಗಿಸುತ್ತಿದೆ.

ಅನುಭವೀ ಹಾಗೂ ನುರಿತ ಉಪನ್ಯಾಸಕ ವೃಂದದವರಿಂದ ಪಿಸಿಯಂಬಿ ವಿಷಯಗಳಲ್ಲಿ ತರಗತಿಗಳು ನಡೆಯಲಿದ್ದು ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ವಿವರಣೆ ಮತ್ತು ಪ್ರಯೋಗಗಳ ಮೂಲಕ ವಿಶೇಷ ಪೂರಕ ಪಾಠ ನಡೆಯಲಿದೆ. ವಿದ್ಯಾರ್ಥಿಗಳು ಮನೆಯಿಂದಲೇ ಲ್ಯಾಪ್‍ಟಾಪ್ ಅಥವಾ ಮೊಬೈಲ್ ಬಳಸಿ ತರಬೇತಿಯನ್ನು ಪಡೆಯಬಹುದು. ತರಬೇತಿ ಅವಧಿಯಲ್ಲಿ ಪ್ರತಿದಿನ ತರಗತಿಗಳು ನಡೆಯಲಿದ್ದು ವಿಸ್ತೃತ ಮತ್ತು ಸರಳವಾದ ಉಪನ್ಯಾಸ ಕಾರ್ಯಕ್ರಮವಿರುತ್ತದೆ.

ತಮ್ಮದೇ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತರಗತಿಯ ವಿಡಿಯೋಗಳನ್ನು ಎಷ್ಟು ಬಾರಿಯದರೂ ವೀಕ್ಷಿಸಲು ಅವಕಾಶವಿರುತ್ತದೆ. ಇದರ ಜೊತೆಗೆ ಯಾವುದೇ ಸಂಶಯಗಳಿಗೆ ಫೋನ್ ಅಥವಾ ವಾಟ್ಸಾಪ್ ಮೂಲಕವೂ ವಿವರಣೆ ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವಾಟ್ಸಾಪ್ ದೂರವಾಣಿ ಸಂಖ್ಯೆಯನ್ನು 9731640407 ಅಥವಾ 9742001857 ದೂರವಾಣಿ ಸಂಖ್ಯೆಗಳಲ್ಲಿ ನೋಂದಾವಣಿ ಮಾಡಿಕೊಂಡು ಇದರ ಪ್ರಯೊಜನವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ಉಚಿತ ತರಗತಿಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

8 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago