ಪುತ್ತೂರು: ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅವರು ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಈ ಇಬ್ಬರು ಪ್ರಾಧ್ಯಾಪಕರ ಸೇವಾ ನಿವೃತ್ತಿಯ ಹಿನ್ನೆಲೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಜ. 31ರಂದು ನಡೆಯಲಿದೆ.
ಡಾ. ಪೀಟರ್ ವಿಲ್ಸನ್ ಪ್ರಭಾಕರ್
ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು 25 ಜನವರಿ 1960 ರಲ್ಲಿ ಜನಿಸಿದ್ದು. 1 ಜನವರಿ 1986ರಲ್ಲಿ ಕಾಲೇಜಿಗೆ ಇತಿಹಾಸ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಬಳಿಕ 1 ಜುಲೈ 2015ರಲ್ಲಿ ಕಾಲೇಜಿನ ಪ್ರಾಚಾರ್ಯರಾಗಿ ಭಡ್ತಿ ಹೊಂದಿ ಸುದೀರ್ಘ 34 ವರ್ಷ ಹಾಗೂ 1 ತಿಂಗಳು ಕಾಲೇಜಿನಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.
ಪ್ರೊ. ವೆಂಕಟ್ರಮಣ ಭಟ್
ಪ್ರೊ. ವೆಂಕಟ್ರಮಣ ಭಟ್ ಅವರು 18 ಜನವರಿ 1960ರಲ್ಲಿ ಜನಿಸಿದ್ದು, 5 ಜೂನ್ 1998 ರಂದು ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಇವರು ಸುದೀರ್ಘ 21 ವರ್ಷ 8 ತಿಂಗಳು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…