Advertisement
ಜಿಲ್ಲೆ

ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋ ಲೋಕಾರ್ಪಣೆ

Share

ಪುತ್ತೂರು: ಮಾಧ್ಯಮಗಳು  ರಾಷ್ಟ್ರೀಯತೆ ಪಂಥವನ್ನೇ ಆದರ್ಶವಾಗಿರಿಸಿ ಕಾರ್ಯತತ್ಪರರಾಗಬೇಕು. ದೇಶದ ಉನ್ನತಿಗೆ ಪೂರಕವಾಗುವ ತೆರನಾದ ಪತ್ರಿಕೋದ್ಯಮ ಅಗತ್ಯವಿವೆ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಅವರು ಮಂಗಳವಾರ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಕ್ಕಾಗಿ ರೂಪಿಸಲಾದ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ಉದ್ಘಾಟನೆಯನ್ನು ನೆರವೇರಿಸಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಂದರ್ಶನ ನೀಡಿ ಮಾತನಾಡಿದರು.

Advertisement

ದೇಶ ವಿರೋಧಿ ಚಿಂತನೆಗೆ ಬೆಂಬಲವನ್ನು ನೀಡುವ ಕಾರ್ಯಗಳನ್ನು ಮಾಧ್ಯಮಗಳು ಮಾಡಬಾರದು. ಇದರ ಬದಲು ರಾಷ್ಟ್ರೀಯ ಚಿಂತನೆಗಳನ್ನು ಪ್ರೇರೇಪಿಸುವ ಕಾರ್ಯ ಮಾಧ್ಯಮದಿಂದಾಗಬೇಕು. ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ಮೂಲಕ ಅತ್ಯುತ್ಕೃಷ್ಟ ಮುಂದಿನ ಪತ್ರಕರ್ತರನ್ನು ತಯಾರಿಸುವ ಉದ್ದೇಶವನ್ನು ಹೊಂದಿದ್ದೇವೆ. ಪತ್ರಿಕೋದ್ಯಮ ಸಂಬಂಧಿ ಚಟುವಟಿಕೆಗಳಿಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿಕೊಡಲು ವಿವೇಕಾನಂದ ವಿದ್ಯಾವರ್ಧಕ ಸಂಘ ಸಿದ್ಧವಾಗಿದೆ ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪಿ.ಶ್ರೀನಿವಾಸ ಪೈ, ಸಂಚಾಲಕ ಎಂ.ಟಿ.ಜಯರಾಮ ಭಟ್, ಕೋಶಾಧಿಕಾರಿ ಸೇಡಿಯಾಪು ಜನಾರ್ಧನ ಭಟ್, ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್, ವಿಶ್ರಾಂತ ಪ್ರಾಂಶುಪಾಲ ಡಾ. ಎಚ್.ಮಾಧವ ಭಟ್, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿಜಯ ಸರಸ್ವತಿ, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್, ಕ್ಯಾಂಪಸ್ ಮ್ಯಾನೇಜರ್ ಲಕ್ಷ್ಮೀಪ್ರಸಾದ್, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ರಾಕೇಶ್ ಕುಮಾರ್ ಕಮ್ಮಜೆ, ಭವ್ಯಾ ಪಿ.ಆರ್., ಸುಶ್ಮಿತಾ ಜೆ., ರಾಧಿಕ ಕಾನತ್ತಡ್ಕ, ಪ್ರಜ್ಞಾ ಬಾರ್ಯ, ಗಣೇಶ್ ಪ್ರಸಾದ್, ಭರತ್‍ರಾಜ್, ಸ್ಟುಡಿಯೋ ನಿರ್ವಾಹಕ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago