ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ್ದರು, ಈ ಕಾರಣದಿಂದ ಎಲ್ಲಾ ವಿದ್ಯಾರ್ಥಿಗಳು ಸಸ್ಪೆಂಡ್..!. ಹೀಗಾಗಿ ಈಗ ವಿದ್ಯಾರ್ಥಿಗಳ ವ್ಯಾಟ್ಸಪ್ ಸ್ಟೇಟಸ್ ಈಗ ಪರ ಹಾಗೂ ವಿರೋಧದ ಮೂಲಕ ಮತ್ತೆ ಚರ್ಚೆಗೆ ಕಾರಣವಾಗಿದೆ.
ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು ವಿದ್ಯಾರ್ಥಿಗಳು ಕಾಲೇಜು ಶುರುವಾದ ಬಳಿಕ ಕ್ಯಾಂಪಸ್ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಗೇಟ್ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ನಿನ್ನೆ ನಡೆದ ಪ್ರತಿಭಟನೆಯ ವಿಡಿಯೋ ಸಹಿತ ಸ್ಟೇಟಸ್ ಹಾಕಿದ್ದಾರೆ. ನಾವೂ ಸಸ್ಪೆಂಡ್ ಆಗಿದ್ದೇವೆ ಎಂದು ಕೆಲವರು ಹಾಕಿದ್ದರೆ ಇನ್ನೂ ಕೆಲವರು ಇಂತಹ ಪ್ರತಿಭಟನೆ ಸರಿಯಲ್ಲ ಎಂದು ಸ್ಟೇಟಸ್ ಹಾಕಿದ್ದಾರೆ.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…