ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ್ದರು, ಈ ಕಾರಣದಿಂದ ಎಲ್ಲಾ ವಿದ್ಯಾರ್ಥಿಗಳು ಸಸ್ಪೆಂಡ್..!. ಹೀಗಾಗಿ ಈಗ ವಿದ್ಯಾರ್ಥಿಗಳ ವ್ಯಾಟ್ಸಪ್ ಸ್ಟೇಟಸ್ ಈಗ ಪರ ಹಾಗೂ ವಿರೋಧದ ಮೂಲಕ ಮತ್ತೆ ಚರ್ಚೆಗೆ ಕಾರಣವಾಗಿದೆ.
ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು ವಿದ್ಯಾರ್ಥಿಗಳು ಕಾಲೇಜು ಶುರುವಾದ ಬಳಿಕ ಕ್ಯಾಂಪಸ್ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಗೇಟ್ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ನಿನ್ನೆ ನಡೆದ ಪ್ರತಿಭಟನೆಯ ವಿಡಿಯೋ ಸಹಿತ ಸ್ಟೇಟಸ್ ಹಾಕಿದ್ದಾರೆ. ನಾವೂ ಸಸ್ಪೆಂಡ್ ಆಗಿದ್ದೇವೆ ಎಂದು ಕೆಲವರು ಹಾಕಿದ್ದರೆ ಇನ್ನೂ ಕೆಲವರು ಇಂತಹ ಪ್ರತಿಭಟನೆ ಸರಿಯಲ್ಲ ಎಂದು ಸ್ಟೇಟಸ್ ಹಾಕಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…