ಪುತ್ತೂರು: ಶಿಕ್ಷಣ ಸಂಸ್ಥೆಗಳು ಸಾಮಾಜಿಕ ಬದಲಾವಣೆಯ ಕೇಂದ್ರಗಳಾಗಬೇಕು. ಶ್ರೇಷ್ಠ ಗುರಿಯನ್ನು ಸಾಧಿಸುವುದಕ್ಕೆ ಶಿಕ್ಷಣ ಒಂದು ಮಾಧ್ಯಮ. ಆದರೆ ಶಿಕ್ಷಣ ಸಂಸ್ಥೆಗಳ ಆಡಳಿತ ಚುಕ್ಕಾಣಿ ಹಿಡಿದವರು ಸಂಸ್ಥೆಯ ಬಗೆಗೆ ಅಪಾರವಾದ ಕಾಳಜಿ, ಪ್ರೀತಿ ತೋರಿದಾಗ ಮಾತ್ರ ಸಂಸ್ಥೆ ಒಳ್ಳೆಯ ರೀತಿಯಲ್ಲಿ ಬೆಳವಣಿಗೆ ಕಾಣುವುದಕ್ಕೆ ಸಾಧ್ಯ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಅವರು ವಿವೇಕಾನಂದ ಕಾಲೇಜಿನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವಿಧ ವಿವೇಕಾನಂದ ಸಂಸ್ಥೆಗಳ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳಿಗಾಗಿ ಆಯೋಜಿಸಿದ ಒಂದು ದಿನದ ಚಿಂತನ ಬೈಠಕ್ನಲ್ಲಿ ಭಾಗವಹಿಸಿ ಮಂಗಳವಾರ ಮಾತನಾಡಿದರು. ಇಂದು ಪ್ರಪಂಚದಾದ್ಯಂತ ಬದಲಾವಣೆಗಳು ಸಾಧ್ಯವಾಗುತ್ತಿವೆ. ಅಂತಹ ಅನೇಕ ಬದಲಾವಣೆಗಳಿಗೆ ಭಾರತವೇ ಕಾರಣವಾಗುತ್ತಿರುವುದು ಮತ್ತು ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ. ಇಂತಹ ಸಂದರ್ಭದಲ್ಲಿ ನಾವೂ ಈ ದೇಶದೊಂದಿಗೆ ಹೆಜ್ಜೆ ಹಾಕಬೇಕು. ಮೆಕಾಲೆ ಶಿಕ್ಷಣದಿಂದ ಮಹರ್ಷಿ ಶಿಕ್ಷಣದೆಡೆಗೆ ನಮ್ಮ ಮಕ್ಕಳನ್ನು ಒಯ್ದಾಗ ಈ ದೇಶದ ಅಸ್ಮಿತೆ ಉಳಿದುಕೊಳ್ಳಲು ಸಾಧ್ಯ ಎಂದರು.
ಉಪಸ್ಥಿತರಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಮಾತನಾಡಿ ವಿವೇಕಾನಂದ ವಿದ್ಯಾವರ್ಧಕ ಸಂಘವನ್ನು ಅನೇಕರು ನಡೆಸಿಕೊಂಡು ಬಂದಿದ್ದಾರೆ. ಆಯಾ ಕಾಲಘಟ್ಟದಲ್ಲಿ ಸಂಸ್ಥೆಯ ಜವಾಬ್ಧಾರಿ ಹೊತ್ತವರು ಆಯಾ ಕಾಲದ ಸವಾಲುಗಳನ್ನೆದುರಿಸಿ ಮುಂದುವರಿಯುವುದಕ್ಕೆ ಪ್ರಯತ್ನ ಪಡಬೇಕು. ಸಮಾಜದ ಅನೇಕರು ವಿವೇಕಾನಂದ ಸಂಸ್ಥೆಗಳಿಗಾಗಿ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ ಎಂದು ನುಡಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ನಡೆಸುವ ಎಲ್ಲಾ ವಿದ್ಯಾ ಸಂಸ್ಥೆಗಳ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಹಾಜರಿದ್ದರು. ಕಾರ್ಯಕ್ರಮ ಆರಂಭಕ್ಕೆ ಮುನ್ನ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಸ್ಥೆಗಳ ಬಗೆಗೆ ವೀಡಿಯೋ ಹಾಗೂ ಪಿಪಿಟಿ ಪ್ರದರ್ಶನ ನಡೆಯಿತು.
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್ ಅವರು ವೈಯಕ್ತಿಕ ಗೀತೆ ಹಾಗೂ ಪ್ರೇರಣಾ ಗೀತೆಯನ್ನು ಪ್ರಸ್ತುತಪಡಿಸಿದರು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…