Advertisement
ಜಿಲ್ಲೆ

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ “ಗ್ರಾಮ ವಿಕಾಸ” ಅಧ್ಯಯನ ಪ್ರವಾಸ

Share

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ “ಗ್ರಾಮ ವಿಕಾಸ” ಎಂಬ ಯೋಜನೆಯ ಅಡಿಯಲ್ಲಿ ಮೇ 18 ಮತ್ತು 19ರಂದು ಧಾರವಾಡ ಮತ್ತು ಮಹಾರಾಷ್ಟ್ರದ ಹಲವು ಪ್ರದೇಶಗಳಿಗೆ ಅಧ್ಯಯನ ಪ್ರವಾಸ ನಡೆಸಲಾಯಿತು.
ಈ ಸಂದರ್ಭ ಅಲ್ಲಿನ ವಿವಿಧ ಗ್ರಾಮ ವಿಕಾಸದ ಕಲ್ಪನೆಯ ಕುರಿತಾಗಿ ಸವಿವರವಾಗಿ ಅಧ್ಯಯನ ನಡೆಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣಸಂಸ್ಥೆಗಳ ಮೂಲಕ ವಿವಿಧ ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಲ್ಲಿ ಅಭಿವೃದ್ಧಿ ಕಾರ್ಯ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮ ವಿಕಾಸ ಯೋಜನೆಯ ಅಡಿಯಲ್ಲಿ ಸುಮಾರು 17 ಗ್ರಾಮಗಳಿಂದ ಹಾಗೂ ವಿವಿಧ ವಿವೇಕಾನಂದ ವಿದ್ಯಾಸಂಸ್ಥೆಗಳಿಂದ ಸುಮಾರು 35 ಪ್ರತಿನಿಧಿಗಳು ಈ ಪ್ರವಾಸದಲ್ಲಿ ಭಾಗವಹಿಸಿದ್ದರು.

ಜ್ಞಾನವಿಕಾಸ ತರಬೇತಿ ಸಂಸ್ಥೆಗೆ ಭೇಟಿ

ಮೇ 18ರಂದು ಧಾರವಾಡದ ರಾಯಪುರದಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ತರಬೇತಿ ಸಂಸ್ಥೆಗೆ ಭೇಟಿ ನೀಡಲಾಯಿತು. ಅಲ್ಲಿ ಜ್ಞಾನವಿಕಾಸ ತರಬೇತಿ ಸಂಸ್ಥೆಯ ನಿರ್ದೇಶಕ ಡಾ. ಪ್ರಕಾಶ್ ಭಟ್ ಅವರು ಕೃಷಿ ಸಂಬಂಧಿ ವಿಷಯ, ಭೂಮಿ, ನೀರು, ಸಾವಯವ ಕೃಷಿ, ಕೃಷಿ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಹೀಗೆ ಕೃಷಿಯಲ್ಲಿ ಲಾಭಗಳಿಸುವ ವಿಧಾನ, ಸುಸ್ಥಿರ ಅಭಿವೃದ್ಧಿ, ಕೊಳವೆ ಬಾವಿಗೆ ಜಲ ಮರುಪೂರಣೆ ಹೀಗೆ ಹಲವು ವಿಷಯದ ಕುರಿತು ಸಂವಾದ ನಡೆಸಲಾಯಿತು. ಸೋಲಾರ್ ಶಕ್ತಿಯಿಂದ ಬಳಸಬಹುದಾದ ಆಧುನಿಕ ಯಂತ್ರಗಳ ಲ್ಯಾಬ್, ಸಿರಿಧಾನ್ಯಗಳ ಮಿಶ್ರಣಗಳ ಉತ್ಪಾದನಾ ಘಟಕ, ಕಟ್ಟಡದ ಮೇಲೆ ಬೀಳುವ ಮಳೆನೀರಿನ ಮರುಬಳಕೆಯನ್ನು ಮಾಡುವ ವಿಧಾನ, ಪ್ರತಿ ದಿನ ಸುಮಾರು 50 ಕೆ.ಜಿ. ಬಯೋಗ್ಯಾಸ್ ಉತ್ಪಾದಿಸುವ ಘಟಕವನ್ನು ಜ್ಞಾನ ವಿಕಾಸ ತರಬೇತಿ ಸಂಸ್ಥೆಯಲ್ಲಿ ವೀಕ್ಷಿಸಲಾಯಿತು.

ಕಣೇರಿ ಸಿದ್ದಗಿರಿ ಮಠಕ್ಕೆ ಭೇಟಿ

ಮೇ 19ರಂದು ಮಹಾರಾಷ್ಟ್ರದ ಕೊಲ್ಲಾಪುರದ ಕಣೇರಿ ಸಿದ್ದಗಿರಿ ಮಠಕ್ಕೆ ಗ್ರಾಮ ವಿಕಾಸ ತಂಡ ಭೇಟಿ ನೀಡಿತು. ಕಣೇರಿ ಮಠದ ಮೂಲಕ ನಡೆಸಲಾಗುತ್ತಿರುವ ವಿವಿಧ ಶಿಕ್ಷಣ ಸಂಬಂಧಿ ಚಟುವಟಿಕೆ ಮಾತ್ರವಲ್ಲದೆ ಆರೋಗ್ಯ, ಯೋಗವಿಜ್ಞಾನ, ಸಾವಯವ ಕೃಷಿ, ಹೈನುಗಾರಿಕೆ ಇತ್ಯಾದಿ ಕ್ಷೇತ್ರಗಳಿಗೆ ಮಠ ನೀಡುತ್ತಿರುವ ಕೊಡುಗೆಗಳ ಬಗೆಗೆ ತಿಳಿದುಕೊಳ್ಳಲಾಯಿತು. ಕಣೇರಿ ಮಠದ ಸುತ್ತ ಸುಮಾರು 250 ಎಕ್ರೆಯಲ್ಲಿ ನಾನಾ ರೀತಿಯ ಗೆಡ್ಡೆ ಗೆಣಸು, ಬಳ್ಳಿಗಳ ಆಹಾರ ಪದಾರ್ಥಗಳು, ಹಣ್ಣು-ಹಂಪಲುಗಳು, ಹೂವು, ಮೇವು, ಮನೆ ಮದ್ದು, ದ್ವಿದಳ ಧಾನ್ಯ, ಎಣ್ಣೆಕಾಳು, ಮಸಾಲೆ ಬೆಳೆಗಳನ್ನು ವೀಕ್ಷಿಸಲಾಯಿತು.

ಗ್ರಾಮ ವಿಕಾಸ ಅಧ್ಯಯನ ಪ್ರವಾಸದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ಅಧ್ಯಯನ ಪ್ರವಾಸದ ಸಂಘಟಕ ವೆಂಕಟೇಶ್ ಮತ್ತು ಹಲವು ಶಾಲಾ, ಕಾಲೇಜು ಆಡಳಿತ ಮಂಡಳಿಯವರು, ಅಧ್ಯಾಪಕರು, ಗ್ರಾಮಸ್ಥರು ಪಾಲ್ಗೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago