Advertisement
ಸುದ್ದಿಗಳು

ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವದಲ್ಲಿ ದಾಸ ಸಂಕೀರ್ತನೆ ಮೂಲಕ ಭಗವಂತನ ನಾಮಸ್ಮರಣೆಯ ಮೆಲುಕು

Share

ಪುತ್ತೂರು: ಮಹತ್ತರವಾದ ಸಾಹಿತ್ಯಗಳು ಮೂಡಿಬರಲು, ದಾಸರ ಮೂಲಕ ಸಂಕೀರ್ತನೆಯಾಗಿ ರಚನೆಯಾಗಲು, ಭಗವಂತನೇ ಶಕ್ತಿಯನ್ನು ನೀಡಿದ್ದಾನೆ. ವೇದದ ಸಾರವನ್ನು ದಾಸರ ಮೂಲಕ ಸಾರಿದ್ದಾನೆ. ಅದರ ಸಾರವನ್ನು ತಿಳಿದು ಬದುಕನ್ನು ಸಾರ್ಥಕಗೊಳಿಸಲು ಸಾಧ್ಯ. ಭಜನೆಯೊಂದಕ್ಕೆ ದೇವರನ್ನು ತಲುಪುವ ಶಕ್ತಿಯಿದೆ. ಅಂತಹ ಭಗವಂತನ ನಾಮದ ಮೆಲುಕು ಹಾಕುವುದರಿಂದ ಧನ್ಯತೆಯನ್ನು ಪಡೆಯಬಹುದು. ಇಂತಹ ಒಂದು ಮಹತ್ತರವಾದ ಕಾರ್ಯ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಆಯೋಜಿಸಲ್ಪಟ್ಟ 38ನೇ ವರುಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಮಂಗಳವಾರ ಬೆಳಗ್ಗೆ ನಡೆದ ದಾಸ ಸಂಕೀರ್ತನೆ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದವರಿಂದ ನಡೆಯಿತು.

Advertisement
Advertisement


ವಿಘ್ನವಿನಾಶಕನ ಸುತ್ತಿಯೊಂದಿಗೆ ದಾಸ ಸಂಕೀರ್ತನೆಯು ಆರಂಭಗೊಡಿತು. ‘ಗಜಾನನ ಗಜಾನನ ಪಾರ್ವತಿ ಸುತ’ ಎಂದು ವಿನಾಶಕನನ್ನು ಸ್ತುತಿಸುತ್ತಾ ಬಂದ ಭಕ್ತರಲ್ಲಿ ಧನ್ಯತೆಯನ್ನು ತುಂಬುತ್ತ, ನೇರ ಭಕ್ತರು ವಿಘ್ನವಿನಾಶಕನ ಸುತ್ತಿಗೆ ಭಾಗಿಗಳಾಗುವಂತೆ ಮಾಡಿತು. ‘ಬಾರೋ ರಾಘವೇಂದ್ರ’ ಎಂದು ನೀನು ವಿನಾಶಕನೊಂದಿಗೆ ಬಂದು ಭಕ್ತರನ್ನು ಸಲಹು ಎಂದು ಬೇಡಿಕೊಳ್ಳಲಾಯಿತು. ‘ಬಾರೆ ಮಣಿ ತನಕ’, ‘ರಂಗಾ ಕೃಷ್ಣಯ್ಯನೇ ಬಾರಯ್ಯ’, ‘ಕಣ್ಣಿನೊಳಗೆ ನೋಡು ಒಳಗಣ್ಣಿನೊಳಗೆ ನೋಡು’ ಎಂದು ಭಕ್ತಿಯಿಂದ ಮಾತ್ರ ದೇವರನ್ನು ತಲುಪಲು ಸಾಧ್ಯ ಎಂದು ಸ್ತುತಿಸುತ್ತಾ ‘ಲಂಕೆ ಹರಿದ ಹನುಮಂತ’ ಹನುಮನ ರಾಮ ಭಕ್ತಿಯನ್ನು ಚಿತ್ರಿಸಿದರು. ‘ಎನ್ನ ಬಿಟ್ಟು ನೀ ಅಗಲದಿರು ಶ್ರೀನಿವಾಸ’ ಎನ್ನುವ ಹಾಡಿನ ಮೂಲಕ ಶ್ರೀನಿವಾಸನನ್ನು ಧ್ಯಾನಿಸಿದರು. ಈ ದಾಸ ಸಂಕೀರ್ತನೆಯ ಹಿಮ್ಮೇಳದಲ್ಲಿ ಕಿಶೋರ್ ಪಲ್ಯ ಮೃದಂಗದಲ್ಲಿ ಹಾಗೂ ತಬಲದಲ್ಲಿ ಗಿರೀಶ್ ಪೆರ್ಲ ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

5 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

5 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago