Advertisement
ಸುದ್ದಿಗಳು

ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವದಲ್ಲಿ ದಾಸ ಸಂಕೀರ್ತನೆ ಮೂಲಕ ಭಗವಂತನ ನಾಮಸ್ಮರಣೆಯ ಮೆಲುಕು

Share

ಪುತ್ತೂರು: ಮಹತ್ತರವಾದ ಸಾಹಿತ್ಯಗಳು ಮೂಡಿಬರಲು, ದಾಸರ ಮೂಲಕ ಸಂಕೀರ್ತನೆಯಾಗಿ ರಚನೆಯಾಗಲು, ಭಗವಂತನೇ ಶಕ್ತಿಯನ್ನು ನೀಡಿದ್ದಾನೆ. ವೇದದ ಸಾರವನ್ನು ದಾಸರ ಮೂಲಕ ಸಾರಿದ್ದಾನೆ. ಅದರ ಸಾರವನ್ನು ತಿಳಿದು ಬದುಕನ್ನು ಸಾರ್ಥಕಗೊಳಿಸಲು ಸಾಧ್ಯ. ಭಜನೆಯೊಂದಕ್ಕೆ ದೇವರನ್ನು ತಲುಪುವ ಶಕ್ತಿಯಿದೆ. ಅಂತಹ ಭಗವಂತನ ನಾಮದ ಮೆಲುಕು ಹಾಕುವುದರಿಂದ ಧನ್ಯತೆಯನ್ನು ಪಡೆಯಬಹುದು. ಇಂತಹ ಒಂದು ಮಹತ್ತರವಾದ ಕಾರ್ಯ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಆಯೋಜಿಸಲ್ಪಟ್ಟ 38ನೇ ವರುಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಮಂಗಳವಾರ ಬೆಳಗ್ಗೆ ನಡೆದ ದಾಸ ಸಂಕೀರ್ತನೆ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದವರಿಂದ ನಡೆಯಿತು.


ವಿಘ್ನವಿನಾಶಕನ ಸುತ್ತಿಯೊಂದಿಗೆ ದಾಸ ಸಂಕೀರ್ತನೆಯು ಆರಂಭಗೊಡಿತು. ‘ಗಜಾನನ ಗಜಾನನ ಪಾರ್ವತಿ ಸುತ’ ಎಂದು ವಿನಾಶಕನನ್ನು ಸ್ತುತಿಸುತ್ತಾ ಬಂದ ಭಕ್ತರಲ್ಲಿ ಧನ್ಯತೆಯನ್ನು ತುಂಬುತ್ತ, ನೇರ ಭಕ್ತರು ವಿಘ್ನವಿನಾಶಕನ ಸುತ್ತಿಗೆ ಭಾಗಿಗಳಾಗುವಂತೆ ಮಾಡಿತು. ‘ಬಾರೋ ರಾಘವೇಂದ್ರ’ ಎಂದು ನೀನು ವಿನಾಶಕನೊಂದಿಗೆ ಬಂದು ಭಕ್ತರನ್ನು ಸಲಹು ಎಂದು ಬೇಡಿಕೊಳ್ಳಲಾಯಿತು. ‘ಬಾರೆ ಮಣಿ ತನಕ’, ‘ರಂಗಾ ಕೃಷ್ಣಯ್ಯನೇ ಬಾರಯ್ಯ’, ‘ಕಣ್ಣಿನೊಳಗೆ ನೋಡು ಒಳಗಣ್ಣಿನೊಳಗೆ ನೋಡು’ ಎಂದು ಭಕ್ತಿಯಿಂದ ಮಾತ್ರ ದೇವರನ್ನು ತಲುಪಲು ಸಾಧ್ಯ ಎಂದು ಸ್ತುತಿಸುತ್ತಾ ‘ಲಂಕೆ ಹರಿದ ಹನುಮಂತ’ ಹನುಮನ ರಾಮ ಭಕ್ತಿಯನ್ನು ಚಿತ್ರಿಸಿದರು. ‘ಎನ್ನ ಬಿಟ್ಟು ನೀ ಅಗಲದಿರು ಶ್ರೀನಿವಾಸ’ ಎನ್ನುವ ಹಾಡಿನ ಮೂಲಕ ಶ್ರೀನಿವಾಸನನ್ನು ಧ್ಯಾನಿಸಿದರು. ಈ ದಾಸ ಸಂಕೀರ್ತನೆಯ ಹಿಮ್ಮೇಳದಲ್ಲಿ ಕಿಶೋರ್ ಪಲ್ಯ ಮೃದಂಗದಲ್ಲಿ ಹಾಗೂ ತಬಲದಲ್ಲಿ ಗಿರೀಶ್ ಪೆರ್ಲ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

8 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

19 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

20 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

20 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago