Advertisement
ಸುದ್ದಿಗಳು

ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವದಲ್ಲಿ ದಾಸ ಸಂಕೀರ್ತನೆ ಮೂಲಕ ಭಗವಂತನ ನಾಮಸ್ಮರಣೆಯ ಮೆಲುಕು

Share

ಪುತ್ತೂರು: ಮಹತ್ತರವಾದ ಸಾಹಿತ್ಯಗಳು ಮೂಡಿಬರಲು, ದಾಸರ ಮೂಲಕ ಸಂಕೀರ್ತನೆಯಾಗಿ ರಚನೆಯಾಗಲು, ಭಗವಂತನೇ ಶಕ್ತಿಯನ್ನು ನೀಡಿದ್ದಾನೆ. ವೇದದ ಸಾರವನ್ನು ದಾಸರ ಮೂಲಕ ಸಾರಿದ್ದಾನೆ. ಅದರ ಸಾರವನ್ನು ತಿಳಿದು ಬದುಕನ್ನು ಸಾರ್ಥಕಗೊಳಿಸಲು ಸಾಧ್ಯ. ಭಜನೆಯೊಂದಕ್ಕೆ ದೇವರನ್ನು ತಲುಪುವ ಶಕ್ತಿಯಿದೆ. ಅಂತಹ ಭಗವಂತನ ನಾಮದ ಮೆಲುಕು ಹಾಕುವುದರಿಂದ ಧನ್ಯತೆಯನ್ನು ಪಡೆಯಬಹುದು. ಇಂತಹ ಒಂದು ಮಹತ್ತರವಾದ ಕಾರ್ಯ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಆಯೋಜಿಸಲ್ಪಟ್ಟ 38ನೇ ವರುಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಮಂಗಳವಾರ ಬೆಳಗ್ಗೆ ನಡೆದ ದಾಸ ಸಂಕೀರ್ತನೆ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದವರಿಂದ ನಡೆಯಿತು.


ವಿಘ್ನವಿನಾಶಕನ ಸುತ್ತಿಯೊಂದಿಗೆ ದಾಸ ಸಂಕೀರ್ತನೆಯು ಆರಂಭಗೊಡಿತು. ‘ಗಜಾನನ ಗಜಾನನ ಪಾರ್ವತಿ ಸುತ’ ಎಂದು ವಿನಾಶಕನನ್ನು ಸ್ತುತಿಸುತ್ತಾ ಬಂದ ಭಕ್ತರಲ್ಲಿ ಧನ್ಯತೆಯನ್ನು ತುಂಬುತ್ತ, ನೇರ ಭಕ್ತರು ವಿಘ್ನವಿನಾಶಕನ ಸುತ್ತಿಗೆ ಭಾಗಿಗಳಾಗುವಂತೆ ಮಾಡಿತು. ‘ಬಾರೋ ರಾಘವೇಂದ್ರ’ ಎಂದು ನೀನು ವಿನಾಶಕನೊಂದಿಗೆ ಬಂದು ಭಕ್ತರನ್ನು ಸಲಹು ಎಂದು ಬೇಡಿಕೊಳ್ಳಲಾಯಿತು. ‘ಬಾರೆ ಮಣಿ ತನಕ’, ‘ರಂಗಾ ಕೃಷ್ಣಯ್ಯನೇ ಬಾರಯ್ಯ’, ‘ಕಣ್ಣಿನೊಳಗೆ ನೋಡು ಒಳಗಣ್ಣಿನೊಳಗೆ ನೋಡು’ ಎಂದು ಭಕ್ತಿಯಿಂದ ಮಾತ್ರ ದೇವರನ್ನು ತಲುಪಲು ಸಾಧ್ಯ ಎಂದು ಸ್ತುತಿಸುತ್ತಾ ‘ಲಂಕೆ ಹರಿದ ಹನುಮಂತ’ ಹನುಮನ ರಾಮ ಭಕ್ತಿಯನ್ನು ಚಿತ್ರಿಸಿದರು. ‘ಎನ್ನ ಬಿಟ್ಟು ನೀ ಅಗಲದಿರು ಶ್ರೀನಿವಾಸ’ ಎನ್ನುವ ಹಾಡಿನ ಮೂಲಕ ಶ್ರೀನಿವಾಸನನ್ನು ಧ್ಯಾನಿಸಿದರು. ಈ ದಾಸ ಸಂಕೀರ್ತನೆಯ ಹಿಮ್ಮೇಳದಲ್ಲಿ ಕಿಶೋರ್ ಪಲ್ಯ ಮೃದಂಗದಲ್ಲಿ ಹಾಗೂ ತಬಲದಲ್ಲಿ ಗಿರೀಶ್ ಪೆರ್ಲ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

11 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

1 day ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

1 day ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

1 day ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago