Advertisement
ಸುದ್ದಿಗಳು

ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವದಲ್ಲಿ ದಾಸ ಸಂಕೀರ್ತನೆ ಮೂಲಕ ಭಗವಂತನ ನಾಮಸ್ಮರಣೆಯ ಮೆಲುಕು

Share

ಪುತ್ತೂರು: ಮಹತ್ತರವಾದ ಸಾಹಿತ್ಯಗಳು ಮೂಡಿಬರಲು, ದಾಸರ ಮೂಲಕ ಸಂಕೀರ್ತನೆಯಾಗಿ ರಚನೆಯಾಗಲು, ಭಗವಂತನೇ ಶಕ್ತಿಯನ್ನು ನೀಡಿದ್ದಾನೆ. ವೇದದ ಸಾರವನ್ನು ದಾಸರ ಮೂಲಕ ಸಾರಿದ್ದಾನೆ. ಅದರ ಸಾರವನ್ನು ತಿಳಿದು ಬದುಕನ್ನು ಸಾರ್ಥಕಗೊಳಿಸಲು ಸಾಧ್ಯ. ಭಜನೆಯೊಂದಕ್ಕೆ ದೇವರನ್ನು ತಲುಪುವ ಶಕ್ತಿಯಿದೆ. ಅಂತಹ ಭಗವಂತನ ನಾಮದ ಮೆಲುಕು ಹಾಕುವುದರಿಂದ ಧನ್ಯತೆಯನ್ನು ಪಡೆಯಬಹುದು. ಇಂತಹ ಒಂದು ಮಹತ್ತರವಾದ ಕಾರ್ಯ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಆಯೋಜಿಸಲ್ಪಟ್ಟ 38ನೇ ವರುಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಮಂಗಳವಾರ ಬೆಳಗ್ಗೆ ನಡೆದ ದಾಸ ಸಂಕೀರ್ತನೆ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದವರಿಂದ ನಡೆಯಿತು.


ವಿಘ್ನವಿನಾಶಕನ ಸುತ್ತಿಯೊಂದಿಗೆ ದಾಸ ಸಂಕೀರ್ತನೆಯು ಆರಂಭಗೊಡಿತು. ‘ಗಜಾನನ ಗಜಾನನ ಪಾರ್ವತಿ ಸುತ’ ಎಂದು ವಿನಾಶಕನನ್ನು ಸ್ತುತಿಸುತ್ತಾ ಬಂದ ಭಕ್ತರಲ್ಲಿ ಧನ್ಯತೆಯನ್ನು ತುಂಬುತ್ತ, ನೇರ ಭಕ್ತರು ವಿಘ್ನವಿನಾಶಕನ ಸುತ್ತಿಗೆ ಭಾಗಿಗಳಾಗುವಂತೆ ಮಾಡಿತು. ‘ಬಾರೋ ರಾಘವೇಂದ್ರ’ ಎಂದು ನೀನು ವಿನಾಶಕನೊಂದಿಗೆ ಬಂದು ಭಕ್ತರನ್ನು ಸಲಹು ಎಂದು ಬೇಡಿಕೊಳ್ಳಲಾಯಿತು. ‘ಬಾರೆ ಮಣಿ ತನಕ’, ‘ರಂಗಾ ಕೃಷ್ಣಯ್ಯನೇ ಬಾರಯ್ಯ’, ‘ಕಣ್ಣಿನೊಳಗೆ ನೋಡು ಒಳಗಣ್ಣಿನೊಳಗೆ ನೋಡು’ ಎಂದು ಭಕ್ತಿಯಿಂದ ಮಾತ್ರ ದೇವರನ್ನು ತಲುಪಲು ಸಾಧ್ಯ ಎಂದು ಸ್ತುತಿಸುತ್ತಾ ‘ಲಂಕೆ ಹರಿದ ಹನುಮಂತ’ ಹನುಮನ ರಾಮ ಭಕ್ತಿಯನ್ನು ಚಿತ್ರಿಸಿದರು. ‘ಎನ್ನ ಬಿಟ್ಟು ನೀ ಅಗಲದಿರು ಶ್ರೀನಿವಾಸ’ ಎನ್ನುವ ಹಾಡಿನ ಮೂಲಕ ಶ್ರೀನಿವಾಸನನ್ನು ಧ್ಯಾನಿಸಿದರು. ಈ ದಾಸ ಸಂಕೀರ್ತನೆಯ ಹಿಮ್ಮೇಳದಲ್ಲಿ ಕಿಶೋರ್ ಪಲ್ಯ ಮೃದಂಗದಲ್ಲಿ ಹಾಗೂ ತಬಲದಲ್ಲಿ ಗಿರೀಶ್ ಪೆರ್ಲ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago