Advertisement
ಸುದ್ದಿಗಳು

ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವದಲ್ಲಿ ದಾಸ ಸಂಕೀರ್ತನೆ ಮೂಲಕ ಭಗವಂತನ ನಾಮಸ್ಮರಣೆಯ ಮೆಲುಕು

Share

ಪುತ್ತೂರು: ಮಹತ್ತರವಾದ ಸಾಹಿತ್ಯಗಳು ಮೂಡಿಬರಲು, ದಾಸರ ಮೂಲಕ ಸಂಕೀರ್ತನೆಯಾಗಿ ರಚನೆಯಾಗಲು, ಭಗವಂತನೇ ಶಕ್ತಿಯನ್ನು ನೀಡಿದ್ದಾನೆ. ವೇದದ ಸಾರವನ್ನು ದಾಸರ ಮೂಲಕ ಸಾರಿದ್ದಾನೆ. ಅದರ ಸಾರವನ್ನು ತಿಳಿದು ಬದುಕನ್ನು ಸಾರ್ಥಕಗೊಳಿಸಲು ಸಾಧ್ಯ. ಭಜನೆಯೊಂದಕ್ಕೆ ದೇವರನ್ನು ತಲುಪುವ ಶಕ್ತಿಯಿದೆ. ಅಂತಹ ಭಗವಂತನ ನಾಮದ ಮೆಲುಕು ಹಾಕುವುದರಿಂದ ಧನ್ಯತೆಯನ್ನು ಪಡೆಯಬಹುದು. ಇಂತಹ ಒಂದು ಮಹತ್ತರವಾದ ಕಾರ್ಯ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಆಯೋಜಿಸಲ್ಪಟ್ಟ 38ನೇ ವರುಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಮಂಗಳವಾರ ಬೆಳಗ್ಗೆ ನಡೆದ ದಾಸ ಸಂಕೀರ್ತನೆ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದವರಿಂದ ನಡೆಯಿತು.


ವಿಘ್ನವಿನಾಶಕನ ಸುತ್ತಿಯೊಂದಿಗೆ ದಾಸ ಸಂಕೀರ್ತನೆಯು ಆರಂಭಗೊಡಿತು. ‘ಗಜಾನನ ಗಜಾನನ ಪಾರ್ವತಿ ಸುತ’ ಎಂದು ವಿನಾಶಕನನ್ನು ಸ್ತುತಿಸುತ್ತಾ ಬಂದ ಭಕ್ತರಲ್ಲಿ ಧನ್ಯತೆಯನ್ನು ತುಂಬುತ್ತ, ನೇರ ಭಕ್ತರು ವಿಘ್ನವಿನಾಶಕನ ಸುತ್ತಿಗೆ ಭಾಗಿಗಳಾಗುವಂತೆ ಮಾಡಿತು. ‘ಬಾರೋ ರಾಘವೇಂದ್ರ’ ಎಂದು ನೀನು ವಿನಾಶಕನೊಂದಿಗೆ ಬಂದು ಭಕ್ತರನ್ನು ಸಲಹು ಎಂದು ಬೇಡಿಕೊಳ್ಳಲಾಯಿತು. ‘ಬಾರೆ ಮಣಿ ತನಕ’, ‘ರಂಗಾ ಕೃಷ್ಣಯ್ಯನೇ ಬಾರಯ್ಯ’, ‘ಕಣ್ಣಿನೊಳಗೆ ನೋಡು ಒಳಗಣ್ಣಿನೊಳಗೆ ನೋಡು’ ಎಂದು ಭಕ್ತಿಯಿಂದ ಮಾತ್ರ ದೇವರನ್ನು ತಲುಪಲು ಸಾಧ್ಯ ಎಂದು ಸ್ತುತಿಸುತ್ತಾ ‘ಲಂಕೆ ಹರಿದ ಹನುಮಂತ’ ಹನುಮನ ರಾಮ ಭಕ್ತಿಯನ್ನು ಚಿತ್ರಿಸಿದರು. ‘ಎನ್ನ ಬಿಟ್ಟು ನೀ ಅಗಲದಿರು ಶ್ರೀನಿವಾಸ’ ಎನ್ನುವ ಹಾಡಿನ ಮೂಲಕ ಶ್ರೀನಿವಾಸನನ್ನು ಧ್ಯಾನಿಸಿದರು. ಈ ದಾಸ ಸಂಕೀರ್ತನೆಯ ಹಿಮ್ಮೇಳದಲ್ಲಿ ಕಿಶೋರ್ ಪಲ್ಯ ಮೃದಂಗದಲ್ಲಿ ಹಾಗೂ ತಬಲದಲ್ಲಿ ಗಿರೀಶ್ ಪೆರ್ಲ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

11 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

18 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago