Advertisement
ಕಾರ್ಯಕ್ರಮಗಳು

ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದಿಂದ ‘ಪಯಣ’ ಕಾರ್ಯಕ್ರಮ

Share

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಹಲವಾರು ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಅವುಗಳನ್ನು ಸದುಪಯೋಗಪಡಿಸಿಕೊಂಡಾಗ ಮುಂದಿನ ಜೀವನದ ದಾರಿ ತೆರೆದುಕೊಳ್ಳುತ್ತದೆ. ಕಾಲೇಜಿನಲ್ಲಿ ಪಠ್ಯ ವಿಷಯವನ್ನು ಹೊರತು ಪಡಿಸಿ ಇತರ ಚಟುವಟಿಕೆಯನ್ನು ಕಲಿಯುವುದರಿಂದ ಹೊಸ ಅವಕಾಶಗಳನ್ನು ನಾವೇ ರೂಪಿಸಿಕೊಳ್ಳಬಹುದು. ಶಿಕ್ಷಣ ಮುಗಿದ ನಂತರ ಒದಗುವ ಯಾವುದೇ ರೀತಿಯ ಉದ್ಯೋಗವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‍ನ ಕಿರಿಯ ಸಹಾಯಕ ಪವನ್ ನಾಯಕ್ ಬಿ. ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ‘ಪಯಣ’ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು. ಬದುಕಿನಲ್ಲಿ ಯಶಸ್ಸು ಗಳಿಸಲು ಸದಾ ಪ್ರಯತ್ನಿಸುತ್ತಿರಬೇಕು. ನಿರಂತರ ಪ್ರಯತ್ನದಿಂದ ವ್ಯಕ್ತಿತ್ವಕ್ಕೆ ಘನತೆ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿಷಯದ ಕುರಿತು ತಿಳಿದುಕೊಳ್ಳುವ ಜೊತೆಗೆ ಇತರ ವಿಷಯಗಳನ್ನು ಅರಿತುಕೊಂಡರೆ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದರು.

ಮಂಗಳೂರಿನ ಆ್ಯಕ್ಸಿಸ್ ಬ್ಯಾಂಕ್‍ನ ಸೇಲ್ಸ್ ಆಫಿಸರ್ ಸುಶ್ಮಿತಾ ರೈ ಅವರು ಮಾತನಾಡಿ, ಆತ್ಮಸ್ಥೈರ್ಯವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಹಾಗಿದ್ದಾಗ ಮುಂದೆ ವೃತ್ತಿ ಜೀವನವನ್ನು ಆರಂಭಿಸುವಾಗ ಇದು ಸಹಕಾರ ಮಾಡುತ್ತದೆ. ಸಮಾಜವನ್ನು ಅಥವಾ ವೇದಿಕೆಯ ಮುಂದೆ ಬಂದು ಮಾತನಾಡುವ ಕಲೆಯನ್ನು ರೂಢಿಸಿಕೊಳ್ಳಬೇಕು. ಇಂತಹ ಪ್ರಕ್ರಿಯೆಯನ್ನು ವಿದ್ಯಾರ್ಥಿಯಾಗಿದ್ದಾಗಲೇ ಅಭ್ಯಸಿಸಿಕೊಂಡರೆ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದರಲ್ಲದೆ ತಮ್ಮ ಜೀವನಾನುಭವವನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ. ಮಂಜುನಾಥ್ ಮಾತನಾಡಿ, ಎಂದಿಗೂ ಆಲಸ್ಯದಿಂದಿರದೆ ಹೊಸ ಚಿಂತನೆಯೊಂದಿಗೆ ತಮ್ಮ ದಿನವನ್ನು ಆರಂಭಿಸುವುದು ಉತ್ತಮ. ಯಾವುದೇ ಕಾರಣಕ್ಕೂ ನಾವು ನಮ್ಮತನವನ್ನು ಬಿಟ್ಟುಕೊಡದೆ ಕ್ರಿಯಾಶೀಲತೆಯಿಂದ ತೊಡಗಿಸಿಕೊಳ್ಳಬೇಕು. ಅದೇ ರೀತಿ ಹೊಸ ಸವಾಲುಗಳನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದರಿಂದ ಜೀವನದಲ್ಲಿ ಪ್ರಗತಿ ಸಾಧಿಸಬಹುದು ಎಂದು ಹೇಳಿದರು.

ವಿದ್ಯಾರ್ಥಿನಿ ಅನುಷಾ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗಗಳ ಮತ್ತು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕಿ ಡಾ. ವಿಜಯ ಸರಸ್ವತಿ ಬಿ. ಸ್ವಾಗತಿಸಿದರು. ವಿದ್ಯಾರ್ಥಿನಿ ರಶ್ಮಿ ಬಿ. ವಂದಿಸಿದರು. ವಿದ್ಯಾರ್ಥಿನಿ ಆಶ್ರಿತ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಅನನ್ಯಾ ವಿ., ಲಕ್ಷ್ಮೀ ಭಟ್, ರಾಘವೇಂದ್ರ, ವರ್ಷಿತ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

1 hour ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

2 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

2 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

9 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago