ಮಂಗಳೂರು: ವಿಶಾಖಾಪಟ್ಟಣಂ ನಲ್ಲಿ ವಿಷಾನಿಲ ಸೋರಿಕೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ತಿಳಿಸಿದ್ದಾರೆ.
ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ‘ಭೋಪಾಲ್ ಅನಿಲ ದುರಂತ’ವನ್ನು ನೆನಪಿಸುವ ಗಂಭೀರ ಘಟನೆ ವಿಶಾಖಾಪಟ್ಟಣಮ್ ನಲ್ಲಿ ಘಟಿಸಿದೆ. ಘಟನೆಯಲ್ಲಿ 11 ಜನರು ಮೃತಪಟ್ಟಿದ್ದು ಅನೇಕರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ‘ಭೋಪಾಲ್ ಅನಿಲ ದುರಂತ’ದ ದೋಷಿಗಳಿಗೆ ಶಿಕ್ಷೆಯಾಗದ ಕಾರಣ ಅದರಲ್ಲಿ ಮೃತಪಟ್ಟ 20 ಸಾವಿರ ಜನರಿಗೆ ಹಾಗೂ ಸ್ಥಳಾಂತಗೊಂಡಿದ್ದ 5 ಲಕ್ಷ ಜನರಿಗೆ ಇದುವರೆಗೂ ನಿಜವಾದ ನ್ಯಾಯ ದೊರಕಿಲ್ಲ. ಇದೇ ಪರಿಸ್ಥಿತಿ ಪುನಃ ಉದ್ಭವಿಸಬಾರದೆಂದು ಸರಕಾರವು ವಿಶಾಖಾಪಟ್ಟಣಮ್ ನಲ್ಲಿ ದೋಷಿಗಳ ಮೇಲೆ ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕು. ಅದೇ ರೀತಿ ಇಂತಹ ಪರಿಸ್ಥಿತಿಯು ದೇಶದ ಇತರೆಡೆ ಉದ್ಭವಿಸಬಾರದೆಂದು ಘಾತಕ- ವಿಷಾನಿಲ ಬಳಸುವ ಯೋಜನೆಗಳನ್ನು ತಕ್ಷಣವೇ ಪರಿಶೀಲಿಸಿ ಅದರ ಸಮೀಕ್ಷೆ ನಡೆಸಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ರಾಜ್ಯ ಹಾಗೂ ಕೇಂದ್ರ ಸರಕಾರವನ್ನುಆಗ್ರಹಿಸಿದೆ.
ಅನಿಲ ಸೋರಿಕೆಯಾಗಲು ಸಂಬಂಧಪಟ್ಟ ಕಂಪನಿಯಷ್ಟೇ ಅಲ್ಲದೇ ಅಲ್ಲಿ ಸುರಕ್ಷತೆಯನ್ನು ಕಠಿಣವಾಗಿ ಪಾಲಿಸದಿರುವ ಪರಿಸರ ಇಲಾಖೆ ಹಾಗೂ ಇತರ ಸಂಬಂಧಿತ ಸರಕಾರಿ ಇಲಾಖೆಗಳು ಜವಾಬ್ದಾರವಾಗಿವೆ. ಆದುದರಿಂದ ದೋಷಿ ಕಂಪನಿಗಳೊಂದಿಗೆ ಸರಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆಯೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…