Advertisement
ಸುದ್ದಿಗಳು

ವಿಶಾಖಾಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣ | ಕಠಿಣ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

Share

ಮಂಗಳೂರು: ವಿಶಾಖಾಪಟ್ಟಣಂ ನಲ್ಲಿ ವಿಷಾನಿಲ ಸೋರಿಕೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ತಿಳಿಸಿದ್ದಾರೆ.

Advertisement
Advertisement

ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ‘ಭೋಪಾಲ್ ಅನಿಲ ದುರಂತ’ವನ್ನು ನೆನಪಿಸುವ ಗಂಭೀರ ಘಟನೆ ವಿಶಾಖಾಪಟ್ಟಣಮ್‌ ನಲ್ಲಿ ಘಟಿಸಿದೆ.  ಘಟನೆಯಲ್ಲಿ 11 ಜನರು ಮೃತಪಟ್ಟಿದ್ದು ಅನೇಕರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ.  ‘ಭೋಪಾಲ್ ಅನಿಲ ದುರಂತ’ದ ದೋಷಿಗಳಿಗೆ ಶಿಕ್ಷೆಯಾಗದ ಕಾರಣ ಅದರಲ್ಲಿ ಮೃತಪಟ್ಟ 20 ಸಾವಿರ ಜನರಿಗೆ ಹಾಗೂ ಸ್ಥಳಾಂತಗೊಂಡಿದ್ದ 5 ಲಕ್ಷ  ಜನರಿಗೆ ಇದುವರೆಗೂ ನಿಜವಾದ ನ್ಯಾಯ ದೊರಕಿಲ್ಲ. ಇದೇ ಪರಿಸ್ಥಿತಿ ಪುನಃ ಉದ್ಭವಿಸಬಾರದೆಂದು ಸರಕಾರವು ವಿಶಾಖಾಪಟ್ಟಣಮ್‌ ನಲ್ಲಿ ದೋಷಿಗಳ ಮೇಲೆ ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕು. ಅದೇ ರೀತಿ ಇಂತಹ ಪರಿಸ್ಥಿತಿಯು ದೇಶದ ಇತರೆಡೆ ಉದ್ಭವಿಸಬಾರದೆಂದು ಘಾತಕ- ವಿಷಾನಿಲ ಬಳಸುವ ಯೋಜನೆಗಳನ್ನು ತಕ್ಷಣವೇ ಪರಿಶೀಲಿಸಿ ಅದರ ಸಮೀಕ್ಷೆ ನಡೆಸಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ರಾಜ್ಯ ಹಾಗೂ ಕೇಂದ್ರ ಸರಕಾರವನ್ನುಆಗ್ರಹಿಸಿದೆ.

ಅನಿಲ ಸೋರಿಕೆಯಾಗಲು ಸಂಬಂಧಪಟ್ಟ ಕಂಪನಿಯಷ್ಟೇ ಅಲ್ಲದೇ ಅಲ್ಲಿ ಸುರಕ್ಷತೆಯನ್ನು ಕಠಿಣವಾಗಿ ಪಾಲಿಸದಿರುವ ಪರಿಸರ ಇಲಾಖೆ ಹಾಗೂ ಇತರ ಸಂಬಂಧಿತ ಸರಕಾರಿ ಇಲಾಖೆಗಳು ಜವಾಬ್ದಾರವಾಗಿವೆ. ಆದುದರಿಂದ ದೋಷಿ ಕಂಪನಿಗಳೊಂದಿಗೆ ಸರಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆಯೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

11 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

11 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

11 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

12 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

12 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

12 hours ago