ಮಂಗಳೂರು: ವಿಶಾಖಾಪಟ್ಟಣಂ ನಲ್ಲಿ ವಿಷಾನಿಲ ಸೋರಿಕೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ತಿಳಿಸಿದ್ದಾರೆ.
ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ‘ಭೋಪಾಲ್ ಅನಿಲ ದುರಂತ’ವನ್ನು ನೆನಪಿಸುವ ಗಂಭೀರ ಘಟನೆ ವಿಶಾಖಾಪಟ್ಟಣಮ್ ನಲ್ಲಿ ಘಟಿಸಿದೆ. ಘಟನೆಯಲ್ಲಿ 11 ಜನರು ಮೃತಪಟ್ಟಿದ್ದು ಅನೇಕರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ‘ಭೋಪಾಲ್ ಅನಿಲ ದುರಂತ’ದ ದೋಷಿಗಳಿಗೆ ಶಿಕ್ಷೆಯಾಗದ ಕಾರಣ ಅದರಲ್ಲಿ ಮೃತಪಟ್ಟ 20 ಸಾವಿರ ಜನರಿಗೆ ಹಾಗೂ ಸ್ಥಳಾಂತಗೊಂಡಿದ್ದ 5 ಲಕ್ಷ ಜನರಿಗೆ ಇದುವರೆಗೂ ನಿಜವಾದ ನ್ಯಾಯ ದೊರಕಿಲ್ಲ. ಇದೇ ಪರಿಸ್ಥಿತಿ ಪುನಃ ಉದ್ಭವಿಸಬಾರದೆಂದು ಸರಕಾರವು ವಿಶಾಖಾಪಟ್ಟಣಮ್ ನಲ್ಲಿ ದೋಷಿಗಳ ಮೇಲೆ ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕು. ಅದೇ ರೀತಿ ಇಂತಹ ಪರಿಸ್ಥಿತಿಯು ದೇಶದ ಇತರೆಡೆ ಉದ್ಭವಿಸಬಾರದೆಂದು ಘಾತಕ- ವಿಷಾನಿಲ ಬಳಸುವ ಯೋಜನೆಗಳನ್ನು ತಕ್ಷಣವೇ ಪರಿಶೀಲಿಸಿ ಅದರ ಸಮೀಕ್ಷೆ ನಡೆಸಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ರಾಜ್ಯ ಹಾಗೂ ಕೇಂದ್ರ ಸರಕಾರವನ್ನುಆಗ್ರಹಿಸಿದೆ.
ಅನಿಲ ಸೋರಿಕೆಯಾಗಲು ಸಂಬಂಧಪಟ್ಟ ಕಂಪನಿಯಷ್ಟೇ ಅಲ್ಲದೇ ಅಲ್ಲಿ ಸುರಕ್ಷತೆಯನ್ನು ಕಠಿಣವಾಗಿ ಪಾಲಿಸದಿರುವ ಪರಿಸರ ಇಲಾಖೆ ಹಾಗೂ ಇತರ ಸಂಬಂಧಿತ ಸರಕಾರಿ ಇಲಾಖೆಗಳು ಜವಾಬ್ದಾರವಾಗಿವೆ. ಆದುದರಿಂದ ದೋಷಿ ಕಂಪನಿಗಳೊಂದಿಗೆ ಸರಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆಯೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…