Advertisement
ಸುದ್ದಿಗಳು

ವಿಶಾಖಾಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣ | ಕಠಿಣ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

Share

ಮಂಗಳೂರು: ವಿಶಾಖಾಪಟ್ಟಣಂ ನಲ್ಲಿ ವಿಷಾನಿಲ ಸೋರಿಕೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ತಿಳಿಸಿದ್ದಾರೆ.

ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ‘ಭೋಪಾಲ್ ಅನಿಲ ದುರಂತ’ವನ್ನು ನೆನಪಿಸುವ ಗಂಭೀರ ಘಟನೆ ವಿಶಾಖಾಪಟ್ಟಣಮ್‌ ನಲ್ಲಿ ಘಟಿಸಿದೆ.  ಘಟನೆಯಲ್ಲಿ 11 ಜನರು ಮೃತಪಟ್ಟಿದ್ದು ಅನೇಕರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ.  ‘ಭೋಪಾಲ್ ಅನಿಲ ದುರಂತ’ದ ದೋಷಿಗಳಿಗೆ ಶಿಕ್ಷೆಯಾಗದ ಕಾರಣ ಅದರಲ್ಲಿ ಮೃತಪಟ್ಟ 20 ಸಾವಿರ ಜನರಿಗೆ ಹಾಗೂ ಸ್ಥಳಾಂತಗೊಂಡಿದ್ದ 5 ಲಕ್ಷ  ಜನರಿಗೆ ಇದುವರೆಗೂ ನಿಜವಾದ ನ್ಯಾಯ ದೊರಕಿಲ್ಲ. ಇದೇ ಪರಿಸ್ಥಿತಿ ಪುನಃ ಉದ್ಭವಿಸಬಾರದೆಂದು ಸರಕಾರವು ವಿಶಾಖಾಪಟ್ಟಣಮ್‌ ನಲ್ಲಿ ದೋಷಿಗಳ ಮೇಲೆ ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕು. ಅದೇ ರೀತಿ ಇಂತಹ ಪರಿಸ್ಥಿತಿಯು ದೇಶದ ಇತರೆಡೆ ಉದ್ಭವಿಸಬಾರದೆಂದು ಘಾತಕ- ವಿಷಾನಿಲ ಬಳಸುವ ಯೋಜನೆಗಳನ್ನು ತಕ್ಷಣವೇ ಪರಿಶೀಲಿಸಿ ಅದರ ಸಮೀಕ್ಷೆ ನಡೆಸಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ರಾಜ್ಯ ಹಾಗೂ ಕೇಂದ್ರ ಸರಕಾರವನ್ನುಆಗ್ರಹಿಸಿದೆ.

ಅನಿಲ ಸೋರಿಕೆಯಾಗಲು ಸಂಬಂಧಪಟ್ಟ ಕಂಪನಿಯಷ್ಟೇ ಅಲ್ಲದೇ ಅಲ್ಲಿ ಸುರಕ್ಷತೆಯನ್ನು ಕಠಿಣವಾಗಿ ಪಾಲಿಸದಿರುವ ಪರಿಸರ ಇಲಾಖೆ ಹಾಗೂ ಇತರ ಸಂಬಂಧಿತ ಸರಕಾರಿ ಇಲಾಖೆಗಳು ಜವಾಬ್ದಾರವಾಗಿವೆ. ಆದುದರಿಂದ ದೋಷಿ ಕಂಪನಿಗಳೊಂದಿಗೆ ಸರಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆಯೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

50 minutes ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

58 minutes ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 hour ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

1 hour ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

11 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

12 hours ago