ಸುದ್ದಿಗಳು

ವಿಶ್ವಕಪ್ ಕ್ರಿಕಟ್: ಭಾರತದ ಜಯಕ್ಕೆ 338 ರನ್ ಗುರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರ್ಮಿಂಗ್‌ಹ್ಯಾಮ್.ವಿಶ್ವಕಪ್ ಕ್ರಿಕಟ್ ನ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಭಾರತಕ್ಕೆ ಇಂಗ್ಲೆಂಡ್ 338 ರನ್ ಗುರಿ ನೀಡಿದೆ‌.
ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ಮೊದಲ ವಿಕೆಟ್‌ನಲ್ಲಿ ಗಳಿಸಿದ ಭರ್ಜರಿ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್ ತಂಡ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತು.

Advertisement
Advertisement

ಬೈರ್‌ಸ್ಟೋವ್ ಶತಕ(111) ರಾಯ್(66) ಹಾಗೂ ಸ್ಟೋಕ್ಸ್(79) ಅರ್ಧಶತಕದ ಕೊಡುಗೆಯ ಸಹಾಯದಿಂದ ಇಂಗ್ಲೆಡ್ ಬೃಹತ್ ಮೊತ್ತ ಪೇರಿಸಿತು‌. ಭಾರತದ ಪರ ವೇಗದ ಬೌಲರ್ ಮುಹಮ್ಮದ್ ಶಮಿ(5-69)ಐದು ವಿಕೆಟ್ ಪಡೆದರು. ಜೋ ರೂಟ್(44) ಹಾಗೂ ವೋಕ್ಸ್(20) ರನ್ ಗಳಿಸಿದರು.

ಟಾಸ್ ಜಯಿಸಿದ ಇಂಗ್ಲೆಂಡ್ ನಾಯಕ ಮೊರ್ಗನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿದ ಬೈರ್‌ಸ್ಟೋವ್ ಹಾಗೂ ರಾಯ್ ಮೊದಲ ವಿಕೆಟ್ ಜೊತೆಯಾಟದಲ್ಲಿ 160 ರನ್ ಸೇರಿಸಿದರು.

ಜೇಸನ್ ರಾಯ್(66, 57 ಎಸೆತ) ವಿಕೆಟನ್ನು ಉರುಳಿಸಿದ ಕುಲದೀಪ್ ಯಾದವ್ ಕೊನೆಗೂ ಮೊದಲ ವಿಕೆಟ್ ಜೊತೆಯಾಟಕ್ಕೆ ತೆರೆ ಎಳೆದರು.

90 ಎಸೆತಗಳಲ್ಲಿ 8 ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ನೆರವಿನಿಂದ ಬೈರ್‌ಸ್ಟೋವ್ ಶತಕ ಪೂರೈಸಿದರು.109 ಎಸೆತಗಳಲ್ಲಿ 111 ರನ್ ಗಳಿಸಿದ ಬೈರ್‌ಸ್ಟೋವ್‌ಗೆ ಶಮಿ ಪೆವಿಲಿಯನ್ ಹಾದಿ ತೋರಿಸಿದರು. ಮುಂದಿನ ಓವರ್‌ನಲ್ಲಿ ನಾಯಕ ಮೊರ್ಗನ್(1) ವಿಕೆಟನ್ನು ಪಡೆದ ಶಮಿ ಇಂಗ್ಲೆಂಡ್‌ಗೆ ತಿರುಗೇಟು ನೀಡಲು ನೆರವಾದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

6 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

15 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

15 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

15 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

16 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

16 hours ago