ಸುದ್ದಿಗಳು

ವಿಶ್ವಕಪ್ ಕ್ರಿಕಟ್: ಭಾರತದ ಜಯಕ್ಕೆ 338 ರನ್ ಗುರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರ್ಮಿಂಗ್‌ಹ್ಯಾಮ್.ವಿಶ್ವಕಪ್ ಕ್ರಿಕಟ್ ನ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಭಾರತಕ್ಕೆ ಇಂಗ್ಲೆಂಡ್ 338 ರನ್ ಗುರಿ ನೀಡಿದೆ‌.
ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ಮೊದಲ ವಿಕೆಟ್‌ನಲ್ಲಿ ಗಳಿಸಿದ ಭರ್ಜರಿ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್ ತಂಡ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತು.

Advertisement

ಬೈರ್‌ಸ್ಟೋವ್ ಶತಕ(111) ರಾಯ್(66) ಹಾಗೂ ಸ್ಟೋಕ್ಸ್(79) ಅರ್ಧಶತಕದ ಕೊಡುಗೆಯ ಸಹಾಯದಿಂದ ಇಂಗ್ಲೆಡ್ ಬೃಹತ್ ಮೊತ್ತ ಪೇರಿಸಿತು‌. ಭಾರತದ ಪರ ವೇಗದ ಬೌಲರ್ ಮುಹಮ್ಮದ್ ಶಮಿ(5-69)ಐದು ವಿಕೆಟ್ ಪಡೆದರು. ಜೋ ರೂಟ್(44) ಹಾಗೂ ವೋಕ್ಸ್(20) ರನ್ ಗಳಿಸಿದರು.

ಟಾಸ್ ಜಯಿಸಿದ ಇಂಗ್ಲೆಂಡ್ ನಾಯಕ ಮೊರ್ಗನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿದ ಬೈರ್‌ಸ್ಟೋವ್ ಹಾಗೂ ರಾಯ್ ಮೊದಲ ವಿಕೆಟ್ ಜೊತೆಯಾಟದಲ್ಲಿ 160 ರನ್ ಸೇರಿಸಿದರು.

ಜೇಸನ್ ರಾಯ್(66, 57 ಎಸೆತ) ವಿಕೆಟನ್ನು ಉರುಳಿಸಿದ ಕುಲದೀಪ್ ಯಾದವ್ ಕೊನೆಗೂ ಮೊದಲ ವಿಕೆಟ್ ಜೊತೆಯಾಟಕ್ಕೆ ತೆರೆ ಎಳೆದರು.

Advertisement

90 ಎಸೆತಗಳಲ್ಲಿ 8 ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ನೆರವಿನಿಂದ ಬೈರ್‌ಸ್ಟೋವ್ ಶತಕ ಪೂರೈಸಿದರು.109 ಎಸೆತಗಳಲ್ಲಿ 111 ರನ್ ಗಳಿಸಿದ ಬೈರ್‌ಸ್ಟೋವ್‌ಗೆ ಶಮಿ ಪೆವಿಲಿಯನ್ ಹಾದಿ ತೋರಿಸಿದರು. ಮುಂದಿನ ಓವರ್‌ನಲ್ಲಿ ನಾಯಕ ಮೊರ್ಗನ್(1) ವಿಕೆಟನ್ನು ಪಡೆದ ಶಮಿ ಇಂಗ್ಲೆಂಡ್‌ಗೆ ತಿರುಗೇಟು ನೀಡಲು ನೆರವಾದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

3 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

4 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

12 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

14 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

15 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

21 hours ago