Advertisement
ಸುದ್ದಿಗಳು

ವಿಶ್ವಕಪ್ ಕ್ರಿಕಟ್: ಭಾರತದ ಜಯಕ್ಕೆ 338 ರನ್ ಗುರಿ

Share

ಬರ್ಮಿಂಗ್‌ಹ್ಯಾಮ್.ವಿಶ್ವಕಪ್ ಕ್ರಿಕಟ್ ನ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಭಾರತಕ್ಕೆ ಇಂಗ್ಲೆಂಡ್ 338 ರನ್ ಗುರಿ ನೀಡಿದೆ‌.
ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ಮೊದಲ ವಿಕೆಟ್‌ನಲ್ಲಿ ಗಳಿಸಿದ ಭರ್ಜರಿ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್ ತಂಡ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತು.

ಬೈರ್‌ಸ್ಟೋವ್ ಶತಕ(111) ರಾಯ್(66) ಹಾಗೂ ಸ್ಟೋಕ್ಸ್(79) ಅರ್ಧಶತಕದ ಕೊಡುಗೆಯ ಸಹಾಯದಿಂದ ಇಂಗ್ಲೆಡ್ ಬೃಹತ್ ಮೊತ್ತ ಪೇರಿಸಿತು‌. ಭಾರತದ ಪರ ವೇಗದ ಬೌಲರ್ ಮುಹಮ್ಮದ್ ಶಮಿ(5-69)ಐದು ವಿಕೆಟ್ ಪಡೆದರು. ಜೋ ರೂಟ್(44) ಹಾಗೂ ವೋಕ್ಸ್(20) ರನ್ ಗಳಿಸಿದರು.

ಟಾಸ್ ಜಯಿಸಿದ ಇಂಗ್ಲೆಂಡ್ ನಾಯಕ ಮೊರ್ಗನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿದ ಬೈರ್‌ಸ್ಟೋವ್ ಹಾಗೂ ರಾಯ್ ಮೊದಲ ವಿಕೆಟ್ ಜೊತೆಯಾಟದಲ್ಲಿ 160 ರನ್ ಸೇರಿಸಿದರು.

ಜೇಸನ್ ರಾಯ್(66, 57 ಎಸೆತ) ವಿಕೆಟನ್ನು ಉರುಳಿಸಿದ ಕುಲದೀಪ್ ಯಾದವ್ ಕೊನೆಗೂ ಮೊದಲ ವಿಕೆಟ್ ಜೊತೆಯಾಟಕ್ಕೆ ತೆರೆ ಎಳೆದರು.

90 ಎಸೆತಗಳಲ್ಲಿ 8 ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ನೆರವಿನಿಂದ ಬೈರ್‌ಸ್ಟೋವ್ ಶತಕ ಪೂರೈಸಿದರು.109 ಎಸೆತಗಳಲ್ಲಿ 111 ರನ್ ಗಳಿಸಿದ ಬೈರ್‌ಸ್ಟೋವ್‌ಗೆ ಶಮಿ ಪೆವಿಲಿಯನ್ ಹಾದಿ ತೋರಿಸಿದರು. ಮುಂದಿನ ಓವರ್‌ನಲ್ಲಿ ನಾಯಕ ಮೊರ್ಗನ್(1) ವಿಕೆಟನ್ನು ಪಡೆದ ಶಮಿ ಇಂಗ್ಲೆಂಡ್‌ಗೆ ತಿರುಗೇಟು ನೀಡಲು ನೆರವಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

12 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

1 day ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

1 day ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

1 day ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago