Advertisement
ಸುದ್ದಿಗಳು

ವಿಶ್ವಕಪ್ ಕ್ರಿಕಟ್: ಭಾರತದ ಜಯಕ್ಕೆ 338 ರನ್ ಗುರಿ

Share

ಬರ್ಮಿಂಗ್‌ಹ್ಯಾಮ್.ವಿಶ್ವಕಪ್ ಕ್ರಿಕಟ್ ನ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಭಾರತಕ್ಕೆ ಇಂಗ್ಲೆಂಡ್ 338 ರನ್ ಗುರಿ ನೀಡಿದೆ‌.
ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ಮೊದಲ ವಿಕೆಟ್‌ನಲ್ಲಿ ಗಳಿಸಿದ ಭರ್ಜರಿ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್ ತಂಡ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತು.

ಬೈರ್‌ಸ್ಟೋವ್ ಶತಕ(111) ರಾಯ್(66) ಹಾಗೂ ಸ್ಟೋಕ್ಸ್(79) ಅರ್ಧಶತಕದ ಕೊಡುಗೆಯ ಸಹಾಯದಿಂದ ಇಂಗ್ಲೆಡ್ ಬೃಹತ್ ಮೊತ್ತ ಪೇರಿಸಿತು‌. ಭಾರತದ ಪರ ವೇಗದ ಬೌಲರ್ ಮುಹಮ್ಮದ್ ಶಮಿ(5-69)ಐದು ವಿಕೆಟ್ ಪಡೆದರು. ಜೋ ರೂಟ್(44) ಹಾಗೂ ವೋಕ್ಸ್(20) ರನ್ ಗಳಿಸಿದರು.

ಟಾಸ್ ಜಯಿಸಿದ ಇಂಗ್ಲೆಂಡ್ ನಾಯಕ ಮೊರ್ಗನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿದ ಬೈರ್‌ಸ್ಟೋವ್ ಹಾಗೂ ರಾಯ್ ಮೊದಲ ವಿಕೆಟ್ ಜೊತೆಯಾಟದಲ್ಲಿ 160 ರನ್ ಸೇರಿಸಿದರು.

ಜೇಸನ್ ರಾಯ್(66, 57 ಎಸೆತ) ವಿಕೆಟನ್ನು ಉರುಳಿಸಿದ ಕುಲದೀಪ್ ಯಾದವ್ ಕೊನೆಗೂ ಮೊದಲ ವಿಕೆಟ್ ಜೊತೆಯಾಟಕ್ಕೆ ತೆರೆ ಎಳೆದರು.

90 ಎಸೆತಗಳಲ್ಲಿ 8 ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ನೆರವಿನಿಂದ ಬೈರ್‌ಸ್ಟೋವ್ ಶತಕ ಪೂರೈಸಿದರು.109 ಎಸೆತಗಳಲ್ಲಿ 111 ರನ್ ಗಳಿಸಿದ ಬೈರ್‌ಸ್ಟೋವ್‌ಗೆ ಶಮಿ ಪೆವಿಲಿಯನ್ ಹಾದಿ ತೋರಿಸಿದರು. ಮುಂದಿನ ಓವರ್‌ನಲ್ಲಿ ನಾಯಕ ಮೊರ್ಗನ್(1) ವಿಕೆಟನ್ನು ಪಡೆದ ಶಮಿ ಇಂಗ್ಲೆಂಡ್‌ಗೆ ತಿರುಗೇಟು ನೀಡಲು ನೆರವಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

5 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

13 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 days ago