Advertisement
ಸುದ್ದಿಗಳು

ವಿಶ್ವಕಪ್ ಕ್ರಿಕಟ್: ಭಾರತದ ಜಯಕ್ಕೆ 338 ರನ್ ಗುರಿ

Share

ಬರ್ಮಿಂಗ್‌ಹ್ಯಾಮ್.ವಿಶ್ವಕಪ್ ಕ್ರಿಕಟ್ ನ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಭಾರತಕ್ಕೆ ಇಂಗ್ಲೆಂಡ್ 338 ರನ್ ಗುರಿ ನೀಡಿದೆ‌.
ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ಮೊದಲ ವಿಕೆಟ್‌ನಲ್ಲಿ ಗಳಿಸಿದ ಭರ್ಜರಿ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್ ತಂಡ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತು.

ಬೈರ್‌ಸ್ಟೋವ್ ಶತಕ(111) ರಾಯ್(66) ಹಾಗೂ ಸ್ಟೋಕ್ಸ್(79) ಅರ್ಧಶತಕದ ಕೊಡುಗೆಯ ಸಹಾಯದಿಂದ ಇಂಗ್ಲೆಡ್ ಬೃಹತ್ ಮೊತ್ತ ಪೇರಿಸಿತು‌. ಭಾರತದ ಪರ ವೇಗದ ಬೌಲರ್ ಮುಹಮ್ಮದ್ ಶಮಿ(5-69)ಐದು ವಿಕೆಟ್ ಪಡೆದರು. ಜೋ ರೂಟ್(44) ಹಾಗೂ ವೋಕ್ಸ್(20) ರನ್ ಗಳಿಸಿದರು.

ಟಾಸ್ ಜಯಿಸಿದ ಇಂಗ್ಲೆಂಡ್ ನಾಯಕ ಮೊರ್ಗನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿದ ಬೈರ್‌ಸ್ಟೋವ್ ಹಾಗೂ ರಾಯ್ ಮೊದಲ ವಿಕೆಟ್ ಜೊತೆಯಾಟದಲ್ಲಿ 160 ರನ್ ಸೇರಿಸಿದರು.

ಜೇಸನ್ ರಾಯ್(66, 57 ಎಸೆತ) ವಿಕೆಟನ್ನು ಉರುಳಿಸಿದ ಕುಲದೀಪ್ ಯಾದವ್ ಕೊನೆಗೂ ಮೊದಲ ವಿಕೆಟ್ ಜೊತೆಯಾಟಕ್ಕೆ ತೆರೆ ಎಳೆದರು.

90 ಎಸೆತಗಳಲ್ಲಿ 8 ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ನೆರವಿನಿಂದ ಬೈರ್‌ಸ್ಟೋವ್ ಶತಕ ಪೂರೈಸಿದರು.109 ಎಸೆತಗಳಲ್ಲಿ 111 ರನ್ ಗಳಿಸಿದ ಬೈರ್‌ಸ್ಟೋವ್‌ಗೆ ಶಮಿ ಪೆವಿಲಿಯನ್ ಹಾದಿ ತೋರಿಸಿದರು. ಮುಂದಿನ ಓವರ್‌ನಲ್ಲಿ ನಾಯಕ ಮೊರ್ಗನ್(1) ವಿಕೆಟನ್ನು ಪಡೆದ ಶಮಿ ಇಂಗ್ಲೆಂಡ್‌ಗೆ ತಿರುಗೇಟು ನೀಡಲು ನೆರವಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

3 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

3 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

12 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

21 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago