Advertisement
ಸುದ್ದಿಗಳು

ವಿಶ್ವಕಪ್ ಕ್ರಿಕಟ್: ಭಾರತದ ಜಯಕ್ಕೆ 338 ರನ್ ಗುರಿ

Share

ಬರ್ಮಿಂಗ್‌ಹ್ಯಾಮ್.ವಿಶ್ವಕಪ್ ಕ್ರಿಕಟ್ ನ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಭಾರತಕ್ಕೆ ಇಂಗ್ಲೆಂಡ್ 338 ರನ್ ಗುರಿ ನೀಡಿದೆ‌.
ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ಮೊದಲ ವಿಕೆಟ್‌ನಲ್ಲಿ ಗಳಿಸಿದ ಭರ್ಜರಿ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್ ತಂಡ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತು.

ಬೈರ್‌ಸ್ಟೋವ್ ಶತಕ(111) ರಾಯ್(66) ಹಾಗೂ ಸ್ಟೋಕ್ಸ್(79) ಅರ್ಧಶತಕದ ಕೊಡುಗೆಯ ಸಹಾಯದಿಂದ ಇಂಗ್ಲೆಡ್ ಬೃಹತ್ ಮೊತ್ತ ಪೇರಿಸಿತು‌. ಭಾರತದ ಪರ ವೇಗದ ಬೌಲರ್ ಮುಹಮ್ಮದ್ ಶಮಿ(5-69)ಐದು ವಿಕೆಟ್ ಪಡೆದರು. ಜೋ ರೂಟ್(44) ಹಾಗೂ ವೋಕ್ಸ್(20) ರನ್ ಗಳಿಸಿದರು.

ಟಾಸ್ ಜಯಿಸಿದ ಇಂಗ್ಲೆಂಡ್ ನಾಯಕ ಮೊರ್ಗನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿದ ಬೈರ್‌ಸ್ಟೋವ್ ಹಾಗೂ ರಾಯ್ ಮೊದಲ ವಿಕೆಟ್ ಜೊತೆಯಾಟದಲ್ಲಿ 160 ರನ್ ಸೇರಿಸಿದರು.

ಜೇಸನ್ ರಾಯ್(66, 57 ಎಸೆತ) ವಿಕೆಟನ್ನು ಉರುಳಿಸಿದ ಕುಲದೀಪ್ ಯಾದವ್ ಕೊನೆಗೂ ಮೊದಲ ವಿಕೆಟ್ ಜೊತೆಯಾಟಕ್ಕೆ ತೆರೆ ಎಳೆದರು.

90 ಎಸೆತಗಳಲ್ಲಿ 8 ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ನೆರವಿನಿಂದ ಬೈರ್‌ಸ್ಟೋವ್ ಶತಕ ಪೂರೈಸಿದರು.109 ಎಸೆತಗಳಲ್ಲಿ 111 ರನ್ ಗಳಿಸಿದ ಬೈರ್‌ಸ್ಟೋವ್‌ಗೆ ಶಮಿ ಪೆವಿಲಿಯನ್ ಹಾದಿ ತೋರಿಸಿದರು. ಮುಂದಿನ ಓವರ್‌ನಲ್ಲಿ ನಾಯಕ ಮೊರ್ಗನ್(1) ವಿಕೆಟನ್ನು ಪಡೆದ ಶಮಿ ಇಂಗ್ಲೆಂಡ್‌ಗೆ ತಿರುಗೇಟು ನೀಡಲು ನೆರವಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

44 seconds ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

9 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

16 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago