Advertisement
ಸುದ್ದಿಗಳು

ವಿಶ್ವಕಪ್ ಕ್ರಿಕಟ್: ಭಾರತದ ಜಯಕ್ಕೆ 338 ರನ್ ಗುರಿ

Share

ಬರ್ಮಿಂಗ್‌ಹ್ಯಾಮ್.ವಿಶ್ವಕಪ್ ಕ್ರಿಕಟ್ ನ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಭಾರತಕ್ಕೆ ಇಂಗ್ಲೆಂಡ್ 338 ರನ್ ಗುರಿ ನೀಡಿದೆ‌.
ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ಮೊದಲ ವಿಕೆಟ್‌ನಲ್ಲಿ ಗಳಿಸಿದ ಭರ್ಜರಿ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್ ತಂಡ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತು.

ಬೈರ್‌ಸ್ಟೋವ್ ಶತಕ(111) ರಾಯ್(66) ಹಾಗೂ ಸ್ಟೋಕ್ಸ್(79) ಅರ್ಧಶತಕದ ಕೊಡುಗೆಯ ಸಹಾಯದಿಂದ ಇಂಗ್ಲೆಡ್ ಬೃಹತ್ ಮೊತ್ತ ಪೇರಿಸಿತು‌. ಭಾರತದ ಪರ ವೇಗದ ಬೌಲರ್ ಮುಹಮ್ಮದ್ ಶಮಿ(5-69)ಐದು ವಿಕೆಟ್ ಪಡೆದರು. ಜೋ ರೂಟ್(44) ಹಾಗೂ ವೋಕ್ಸ್(20) ರನ್ ಗಳಿಸಿದರು.

ಟಾಸ್ ಜಯಿಸಿದ ಇಂಗ್ಲೆಂಡ್ ನಾಯಕ ಮೊರ್ಗನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿದ ಬೈರ್‌ಸ್ಟೋವ್ ಹಾಗೂ ರಾಯ್ ಮೊದಲ ವಿಕೆಟ್ ಜೊತೆಯಾಟದಲ್ಲಿ 160 ರನ್ ಸೇರಿಸಿದರು.

ಜೇಸನ್ ರಾಯ್(66, 57 ಎಸೆತ) ವಿಕೆಟನ್ನು ಉರುಳಿಸಿದ ಕುಲದೀಪ್ ಯಾದವ್ ಕೊನೆಗೂ ಮೊದಲ ವಿಕೆಟ್ ಜೊತೆಯಾಟಕ್ಕೆ ತೆರೆ ಎಳೆದರು.

90 ಎಸೆತಗಳಲ್ಲಿ 8 ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ನೆರವಿನಿಂದ ಬೈರ್‌ಸ್ಟೋವ್ ಶತಕ ಪೂರೈಸಿದರು.109 ಎಸೆತಗಳಲ್ಲಿ 111 ರನ್ ಗಳಿಸಿದ ಬೈರ್‌ಸ್ಟೋವ್‌ಗೆ ಶಮಿ ಪೆವಿಲಿಯನ್ ಹಾದಿ ತೋರಿಸಿದರು. ಮುಂದಿನ ಓವರ್‌ನಲ್ಲಿ ನಾಯಕ ಮೊರ್ಗನ್(1) ವಿಕೆಟನ್ನು ಪಡೆದ ಶಮಿ ಇಂಗ್ಲೆಂಡ್‌ಗೆ ತಿರುಗೇಟು ನೀಡಲು ನೆರವಾದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

1 hour ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

14 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

24 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago