Advertisement
ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾಕ್ಕೆ ಕಠಿಣ ಸವಾಲು ನೀಡಿದ ಭಾರತ

Share

ಲಂಡನ್ :  ವಿಶ್ವಕಪ್ ಕ್ರಿಕಟ್ ನ ತನ್ನ ಎರಡನೇ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.  ಆಸ್ಟ್ರೇಲಿಯಾ ತಂಡದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಆ ಮೂಲಕ ಆಸ್ಟ್ರೇಲಿಯಾಕ್ಕೆ 353 ರನ್ ಗೆಲುವಿನ ಗುರಿ ನೀಡಿದೆ.

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ (117ರನ್, 109 ಬಾಲ್ 16ಬೌಂಡರಿ) ಬಾರಿಸಿದ ಆಕರ್ಷಕ ಶತಕ ಬೃಹತ್ ಮೊತ್ತ ಪೇರಿಸಲು ಭಾರತಕ್ಕೆ ಸಹಾಯಕವಾಯಿತು. ನಾಯಕ ವಿರಾಟ್ ಕೊಹ್ಲಿ 82ರನ್ (77 ಬಾಲ್, 4 ಬೌಂಡರಿ, 2 ಸಿಕ್ಸರ್), ರೋಹಿತ್ ಶರ್ಮ 57 ರನ್(70 ಬಾಲ್ 3 ಬೌಂಡರಿ,1 ಸಿಕ್ಸರ್), ಹಾರ್ದಿಕ್ ಪಾಂಡ್ಯ 48ರನ್(27ಬಾಲ್, 3ಬೌಂಡರಿ,4 ಸಿಕ್ಸರ್), ಮಹೇಂದ್ರ ಸಿಂಗ್ ಧೋನಿ 27ರನ್ (14ಬಾಲ್, 3 ಬೌಂಡರಿ, 1ಸಿಕ್ಸರ್ ), ಕೆ.ಎಲ್. ರಾಹುಲ್ ಮೂರು ಬಾಲ್ ನಲ್ಲಿ 11 ರನ್ ಗಳಿಸಿ ಆಕರ್ಷಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ನಾಲ್ಕನೇ ಅತೀ ದೊಡ್ಡ ಮೊತ್ತ ದಾಖಲಿಸುವ ಮೂಲಕ ಕೆನ್ನಿಂಗ್ಟನ್ ಓವಲ್ ನಲ್ಲಿ ಭಾರತ ತನ್ನ ಬ್ಯಾಟಿಂಗ್ ಶಕ್ತಿಯನ್ನು ಪ್ರದರ್ಶಿಸಿತು. ಶಿಖರ್ ಧವನ್- ರೋಹಿತ್ ಶರ್ಮ ಓಪನಿಂಗ್ ಜೋಡಿ ಮೊದಲ ವಿಕೆಟಿಗೆ 127 ರನ್ ಕಲೆ ಹಾಕಿತ್ತು. ಎರಡನೇ ವಿಕೆಟ್ ಗೆ ಧವನ್ -ಕೊಹ್ಲಿ 93 ರನ್ ಪೇರಿಸ ಭಾರತದ ಇನ್ನೀಂಗ್ಸ್ ಗೆ ಭದ್ರ ಬುನಾದಿ ಹಾಕಿತ್ತು. ಕೋಹ್ಲಿ-ಹಾರ್ದಿಕ್ ಪಾಂಡ್ಯ ಜೋಡಿ 53 ಬಾಲ್ ನಲ್ಲಿ 80 ರನ್ ಕಲೆ ಹಾಕಿ ಆಸ್ಟ್ರೇಲಿಯಾ ಬೌಲರ್‌ಗಳ ಬೆವರಿಳಿಸಿದರು.

ಇತ್ತೀಚಿನ ವರದಿ ಬಂದಾಗ   ಆಸ್ಟ್ರೇಲಿಯಾ 20 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 105 ರನ್ ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago