Advertisement
ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾಕ್ಕೆ ಕಠಿಣ ಸವಾಲು ನೀಡಿದ ಭಾರತ

Share

ಲಂಡನ್ :  ವಿಶ್ವಕಪ್ ಕ್ರಿಕಟ್ ನ ತನ್ನ ಎರಡನೇ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.  ಆಸ್ಟ್ರೇಲಿಯಾ ತಂಡದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಆ ಮೂಲಕ ಆಸ್ಟ್ರೇಲಿಯಾಕ್ಕೆ 353 ರನ್ ಗೆಲುವಿನ ಗುರಿ ನೀಡಿದೆ.

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ (117ರನ್, 109 ಬಾಲ್ 16ಬೌಂಡರಿ) ಬಾರಿಸಿದ ಆಕರ್ಷಕ ಶತಕ ಬೃಹತ್ ಮೊತ್ತ ಪೇರಿಸಲು ಭಾರತಕ್ಕೆ ಸಹಾಯಕವಾಯಿತು. ನಾಯಕ ವಿರಾಟ್ ಕೊಹ್ಲಿ 82ರನ್ (77 ಬಾಲ್, 4 ಬೌಂಡರಿ, 2 ಸಿಕ್ಸರ್), ರೋಹಿತ್ ಶರ್ಮ 57 ರನ್(70 ಬಾಲ್ 3 ಬೌಂಡರಿ,1 ಸಿಕ್ಸರ್), ಹಾರ್ದಿಕ್ ಪಾಂಡ್ಯ 48ರನ್(27ಬಾಲ್, 3ಬೌಂಡರಿ,4 ಸಿಕ್ಸರ್), ಮಹೇಂದ್ರ ಸಿಂಗ್ ಧೋನಿ 27ರನ್ (14ಬಾಲ್, 3 ಬೌಂಡರಿ, 1ಸಿಕ್ಸರ್ ), ಕೆ.ಎಲ್. ರಾಹುಲ್ ಮೂರು ಬಾಲ್ ನಲ್ಲಿ 11 ರನ್ ಗಳಿಸಿ ಆಕರ್ಷಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ನಾಲ್ಕನೇ ಅತೀ ದೊಡ್ಡ ಮೊತ್ತ ದಾಖಲಿಸುವ ಮೂಲಕ ಕೆನ್ನಿಂಗ್ಟನ್ ಓವಲ್ ನಲ್ಲಿ ಭಾರತ ತನ್ನ ಬ್ಯಾಟಿಂಗ್ ಶಕ್ತಿಯನ್ನು ಪ್ರದರ್ಶಿಸಿತು. ಶಿಖರ್ ಧವನ್- ರೋಹಿತ್ ಶರ್ಮ ಓಪನಿಂಗ್ ಜೋಡಿ ಮೊದಲ ವಿಕೆಟಿಗೆ 127 ರನ್ ಕಲೆ ಹಾಕಿತ್ತು. ಎರಡನೇ ವಿಕೆಟ್ ಗೆ ಧವನ್ -ಕೊಹ್ಲಿ 93 ರನ್ ಪೇರಿಸ ಭಾರತದ ಇನ್ನೀಂಗ್ಸ್ ಗೆ ಭದ್ರ ಬುನಾದಿ ಹಾಕಿತ್ತು. ಕೋಹ್ಲಿ-ಹಾರ್ದಿಕ್ ಪಾಂಡ್ಯ ಜೋಡಿ 53 ಬಾಲ್ ನಲ್ಲಿ 80 ರನ್ ಕಲೆ ಹಾಕಿ ಆಸ್ಟ್ರೇಲಿಯಾ ಬೌಲರ್‌ಗಳ ಬೆವರಿಳಿಸಿದರು.

ಇತ್ತೀಚಿನ ವರದಿ ಬಂದಾಗ   ಆಸ್ಟ್ರೇಲಿಯಾ 20 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 105 ರನ್ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

4 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

4 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago