Advertisement
ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾಕ್ಕೆ ಕಠಿಣ ಸವಾಲು ನೀಡಿದ ಭಾರತ

Share

ಲಂಡನ್ :  ವಿಶ್ವಕಪ್ ಕ್ರಿಕಟ್ ನ ತನ್ನ ಎರಡನೇ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.  ಆಸ್ಟ್ರೇಲಿಯಾ ತಂಡದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಆ ಮೂಲಕ ಆಸ್ಟ್ರೇಲಿಯಾಕ್ಕೆ 353 ರನ್ ಗೆಲುವಿನ ಗುರಿ ನೀಡಿದೆ.

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ (117ರನ್, 109 ಬಾಲ್ 16ಬೌಂಡರಿ) ಬಾರಿಸಿದ ಆಕರ್ಷಕ ಶತಕ ಬೃಹತ್ ಮೊತ್ತ ಪೇರಿಸಲು ಭಾರತಕ್ಕೆ ಸಹಾಯಕವಾಯಿತು. ನಾಯಕ ವಿರಾಟ್ ಕೊಹ್ಲಿ 82ರನ್ (77 ಬಾಲ್, 4 ಬೌಂಡರಿ, 2 ಸಿಕ್ಸರ್), ರೋಹಿತ್ ಶರ್ಮ 57 ರನ್(70 ಬಾಲ್ 3 ಬೌಂಡರಿ,1 ಸಿಕ್ಸರ್), ಹಾರ್ದಿಕ್ ಪಾಂಡ್ಯ 48ರನ್(27ಬಾಲ್, 3ಬೌಂಡರಿ,4 ಸಿಕ್ಸರ್), ಮಹೇಂದ್ರ ಸಿಂಗ್ ಧೋನಿ 27ರನ್ (14ಬಾಲ್, 3 ಬೌಂಡರಿ, 1ಸಿಕ್ಸರ್ ), ಕೆ.ಎಲ್. ರಾಹುಲ್ ಮೂರು ಬಾಲ್ ನಲ್ಲಿ 11 ರನ್ ಗಳಿಸಿ ಆಕರ್ಷಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ನಾಲ್ಕನೇ ಅತೀ ದೊಡ್ಡ ಮೊತ್ತ ದಾಖಲಿಸುವ ಮೂಲಕ ಕೆನ್ನಿಂಗ್ಟನ್ ಓವಲ್ ನಲ್ಲಿ ಭಾರತ ತನ್ನ ಬ್ಯಾಟಿಂಗ್ ಶಕ್ತಿಯನ್ನು ಪ್ರದರ್ಶಿಸಿತು. ಶಿಖರ್ ಧವನ್- ರೋಹಿತ್ ಶರ್ಮ ಓಪನಿಂಗ್ ಜೋಡಿ ಮೊದಲ ವಿಕೆಟಿಗೆ 127 ರನ್ ಕಲೆ ಹಾಕಿತ್ತು. ಎರಡನೇ ವಿಕೆಟ್ ಗೆ ಧವನ್ -ಕೊಹ್ಲಿ 93 ರನ್ ಪೇರಿಸ ಭಾರತದ ಇನ್ನೀಂಗ್ಸ್ ಗೆ ಭದ್ರ ಬುನಾದಿ ಹಾಕಿತ್ತು. ಕೋಹ್ಲಿ-ಹಾರ್ದಿಕ್ ಪಾಂಡ್ಯ ಜೋಡಿ 53 ಬಾಲ್ ನಲ್ಲಿ 80 ರನ್ ಕಲೆ ಹಾಕಿ ಆಸ್ಟ್ರೇಲಿಯಾ ಬೌಲರ್‌ಗಳ ಬೆವರಿಳಿಸಿದರು.

ಇತ್ತೀಚಿನ ವರದಿ ಬಂದಾಗ   ಆಸ್ಟ್ರೇಲಿಯಾ 20 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 105 ರನ್ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

14 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

21 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago